More

    ಯುಗಾದಿ ದಿನವೇ ಮುಗಿದ ಬದುಕು!; ಪತಿಯ ಅನುಮಾನಕ್ಕೆ ಪತ್ನಿ ಬಲಿ

    ಚಿಕ್ಕಬಳ್ಳಾಪುರ‌: ವರ್ಷಾರಂಭದ ಯುಗಾದಿಯಂದೇ ಇಲ್ಲೊಬ್ಬಾಕೆಯ ಜೀವನವೇ ಕೊನೆಗೊಂಡಿದೆ. ಅದರಲ್ಲೂ ಈಕೆಯ ಬದುಕು ಮುಗಿಯಲು ಪತಿಯೇ ಕಾರಣವಾಗಿದ್ದಾನೆ. ಅರ್ಥಾತ್, ಗಂಡನೇ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.

    ಇದನ್ನೂ ಓದಿ: ಪೊಲೀಸರಿಂದಲೇ ಅಪಹರಣ, ಹಣಕ್ಕೆ ಬೇಡಿಕೆ?; ತಲೆಮರೆಸಿಕೊಂಡಿರುವ ಸಬ್​ ಇನ್​ಸ್ಪೆಕ್ಟರ್!

    ಶಿಡ್ಲಘಟ್ಟ ತಾಲೂಕಿನ ಚಿಕ್ಕದಿಬ್ಬೂರಹಳ್ಳಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಚಿಕ್ಕದಿಬ್ಬೂರಹಳ್ಳಿ ಗ್ರಾಮದ ಗಾಯತ್ರಿ (35) ಕೊಲೆಯಾದ ಮಹಿಳೆ. ಈಕೆಯ ಪತಿ ಅಶ್ವತ್ಥಪ್ಪ (42) ಕೊಲೆ ಆರೋಪಿ. ಪತ್ನಿಯ ಮೇಲಿನ ಅನುಮಾನದಿಂದ ಈತ ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

    ಇದನ್ನೂ ಓದಿ: ದೆಹಲಿಯಲ್ಲಿ ಭೂಕಂಪ!; ವರ್ಷಾರಂಭದಲ್ಲೇ ನಡುಗಿದ ಭೂಮಿ, ಆತಂಕದಲ್ಲಿ ರಾಜಧಾನಿಯ ಜನತೆ

    ಗಾಯತ್ರಿಯನ್ನು ದೊಣ್ಣೆಯಿಂದ ಹೊಡೆದು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರೀಗ ತಾಯಿಯನ್ನು ಕಳೆದುಕೊಂಡಂತಾಗಿದೆ. ದಿಬ್ಬೂರಹಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

    ಹತ್ತು ವರ್ಷಗಳಿಗೂ ಅಧಿಕ ಕಾಲ ಒಂದಾದ ಮೇಲೊಂದು ಹೆರಿಗೆ; 28ನೇ ವಯಸ್ಸಿನಲ್ಲೇ 9 ಮಕ್ಕಳ ಮಹಾತಾಯಿ!

    ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts