More

    ಗಂಡನನ್ನು ಕೊಲ್ಲಿಸಿ ಅಪಘಾತ ಎಂದು ಬಿಂಬಿಸಿದ್ದ ಪತ್ನಿ; ಕೊಲೆಗೈದ ಪ್ರಿಯಕರನ ಸಹಿತ ಸಿಕ್ಕಿಬಿದ್ದಳು; ಒಟ್ಟು ಮೂವರ ಬಂಧನ…

    ಹಾಸನ: ಪ್ರಿಯಕರ ಮತ್ತು ಆತನ ಸಹಚರನಿಂದ ಗಂಡನನ್ನೇ ಕೊಲೆ ಮಾಡಿಸಿ, ಬಳಿಕ ಅದನ್ನು ಅಪಘಾತ ಎಂಬಂತೆ ಬಿಂಬಿಸಿದ್ದ ಹೆಂಡತಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಈ ಮೂಲಕ ಮುಚ್ಚಿ ಹೋಗಬಹುದಾಗಿದ್ದ ಪ್ರಕರಣವೊಂದನ್ನು ಪೊಲೀಸರು ಭೇದಿಸಿ ಬಯಲಿಗೆಳೆದಿದ್ದಾರೆ.

    ಪತ್ನಿ ಶ್ರುತಿ, ಪ್ರಿಯಕರ ಚಂದ್ರಶೇಖರ ಹಾಗೂ ಆತನ ಸ್ನೇಹಿತ ಕಿರಣ್ ಬಂಧಿತ ಆರೋಪಿಗಳು. ಕೊಡಗು ಶನಿವಾರಸಂತೆ ನಿವಾಸಿ ಸಂತೋಷ್​ ಹೆಂಡತಿಯಿಂದಲೇ ಕೊಲೆಗೀಡಾದ ಪತಿ. ಕಳೆದ ಡಿಸೆಂಬರ್ 26ರಂದು ಹಾಸನ ಜಿಲ್ಲೆಯ ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮರಡಿಕೆರೆ ಗ್ರಾಮದಲ್ಲಿ ಈ ಪ್ರಕರಣ ನಡೆದಿತ್ತು.

    ಇದನ್ನೂ ಓದಿ: ಗಂಡ-ಹೆಂಡತಿ ಜಗಳದ ದುರ್ಲಾಭ ಪಡೆಯಲು ಯತ್ನಿಸಿದ ಪೊಲೀಸ್​; ಇನ್​ಸ್ಪೆಕ್ಟರ್​-ಎಎಸ್​ಐ ವಿರುದ್ಧ ದಾಖಲಾಯಿತು ಎಫ್​​ಐಆರ್​

    ಪತಿಯನ್ನು ಕೊಲೆ ಮಾಡಿಸುವ ಸಲುವಾಗಿ ಈಕೆ ಪ್ರಿಯಕರನಿಗೆ ಮಾಹಿತಿ ನೀಡಿದ್ದಳು. ಗಂಡ ಗಾರೆ ಕೆಲಸ ಮುಗಿಸಿ ಬರುತ್ತಿದ್ದಾಗ ಮಾರ್ಗಮಧ್ಯೆ ಎದುರಾದ ಚಂದ್ರಶೇಖರ, ಸಂತೋಷ್ ಬೈಕ್ ತಡೆದು ನಿಲ್ಲಿಸಿ, ತನ್ನ ಕಾರು ಕೆಟ್ಟಿದೆ, ಸಹಾಯಕ್ಕೆ ಬಾ ಎಂದು ಕರೆದಿದ್ದ.

    ಇದನ್ನೂ ಓದಿ: ಗಂಡನನ್ನು ಕೊಂದು ಗುಂಡಿ ತೋಡಿ ಮುಚ್ಚಿದ ಪತ್ನಿ; ಬಳಿಕ ಮೊಬೈಲ್​ಫೋನ್​ ಸ್ವಿಚ್ಡ್​ ಆಫ್ ಮಾಡಿ ಪರಾರಿ

    ಸಹಾಯಕ್ಕೆಂದು ಬಂದ ಸಂತೋಷ್​ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ ಚಂದ್ರಶೇಖರ ಮತ್ತು ಕಿರಣ್​, ಬಳಿಕ ಶವವನ್ನು ಬೈಕ್​ ಮೇಲೆ ಹಾಕಿ ಅದು ಅಪಘಾತ ಎಂಬಂತೆ ಬಿಂಬಿಸಿದ್ದರು.
    ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಇನ್​ಸ್ಪೆಕ್ಟರ್ ಚೈತನ್ಯ ಮತ್ತು ತಂಡ ಈ ಪ್ರಕರಣವನ್ನು ಭೇದಿಸುವ ಮೂಲಕ ಮುಚ್ಚಿಹೋಗಬಹುದಾಗಿದ್ದ ಸಂಗತಿಯನ್ನು ಬಯಲಿಗೆಳೆದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

    ಜ. 31ರವರೆಗೂ ಶಾಲೆಗಳಿಗೆ ರಜೆ; 1ರಿಂದ 9ರ ವರೆಗಿನ ತರಗತಿಗಳಿಗಷ್ಟೇ ಅನ್ವಯ: ಬಿಎಂಸಿ ಘೋಷಣೆ

    ಸಾವಿರಾರು ಜನರ ಖಾತೆಗೆ ಬಂದು ಬಿತ್ತು ಭಾರಿ ಹಣ!; 75 ಸಾವಿರ ಖಾತೆಗಳಿಗೆ ಒಟ್ಟು 1,310 ಕೋಟಿ ರೂ. ಜಮೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts