ರಾತ್ರೋರಾತ್ರಿ ಮನೆಯಲ್ಲೇ ಪತ್ನಿಯನ್ನು ಕೊಚ್ಚಿ ಹಾಕಿದ ಭೂಪ! ಮಗನ ಕೃತ್ಯಕ್ಕೆ ಬೆಚ್ಚಿದ ತಾಯಿಯೂ ಬದುಕಲಿಲ್ಲ

ಹಾಸನ: ರಾತ್ರೋರಾತ್ರಿ ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಮತ್ತೊಂದು ಜೀವ ಬಲಿಯಾಗಿದೆ. ಚನ್ನರಾಯಪಟ್ಟಣ ತಾಲೂಕಿನ ರಾಚೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ 25 ವರ್ಷದ ಪೂಜಾಳನ್ನು ಈಕೆಯ ಗಂಡ ಗಂಗಾಧರ್(28) ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ. ತನ್ನ ಮಗನಿಂದಲೇ ಸೊಸೆ ಕೊಲೆಯಾಗಿರುವ ಸುದ್ದಿ ಕೇಳುತ್ತಿದ್ದಂತೆ ಆಘಾತಗೊಂಡ ಗಂಗಾಧರ್​ ತಾಯಿ ಜಯಮ್ಮ, ವಿಷ ಸೇವಿಸಿದ್ದರು. ಮಗನ ದುಷ್ಕೃತ್ಯಕ್ಕೆ ನೊಂದ ಜಯಮ್ಮ(52), ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಸಾವು-ಬದುಕಿನ ನಡುವೆ ನರಳಾಡುತ್ತಿದ್ದ ಜಯಮ್ಮರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ … Continue reading ರಾತ್ರೋರಾತ್ರಿ ಮನೆಯಲ್ಲೇ ಪತ್ನಿಯನ್ನು ಕೊಚ್ಚಿ ಹಾಕಿದ ಭೂಪ! ಮಗನ ಕೃತ್ಯಕ್ಕೆ ಬೆಚ್ಚಿದ ತಾಯಿಯೂ ಬದುಕಲಿಲ್ಲ