ರಾಯಚೂರು: ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಕ್ಕೆ ನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗುರಗುಂಟಾದಲ್ಲಿ ಈ ಘಟನೆ ನಡೆದಿದೆ.
ಗಿರಿಧರ (42) ಆತ್ಮಹತ್ಯೆ ಮಾಡಿಕೊಂಡ ಪತಿ. ಖಾಸಗಿ ಶಾಲೆಯ ಶಿಕ್ಷಕ ಆಗಿರುವ ಇವರ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಳು. ಇದರಿಂದ ತೀವ್ರವಾಗಿ ನೊಂದ ಶಿಕ್ಷಕ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಓಡಿಹೋದವರ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಹಟ್ಟಿ ಚಿನ್ನದ ಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮದ್ವೆಯಾದ ಹತ್ತೇ ತಿಂಗಳಲ್ಲಿ ದುರಂತ; ಪತ್ನಿಯ ಶವ ನೋಡಿ ಪತಿಯೂ ಆತ್ಮಹತ್ಯೆ…
ಮಸೀದಿ-ಮಂದಿರಗಳ ಧ್ವನಿವರ್ಧಕದ ಶಬ್ದ ತಗ್ಗಿಸದಿದ್ದರೆ ಕಾನೂನುಕ್ರಮ: ಪೊಲೀಸ್ ಕಮಿಷನರ್