ಅಡಕೆ ತೋಟದ ಮೇಲೆ ಕಾಡುಹಂದಿ ದಾಳಿ

blank

ಲಿಂಗದಹಳ್ಳಿ: ನಂದಿಬಟ್ಟಲು ಮತ್ತು ತಿಗಡ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡು ಹಂದಿಗಳು ಅಡಕೆ, ತೆಂಗು,ಬಾಳೆ ತೋಟದ ಬೆಳೆಗಳ್ನು ನಾಶ ಮಾಡುತ್ತಿರುವುದರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತಿದೆ.
ಕಲ್ಲತ್ತಿಪುರದ ರೈತ ಸೆಲ್ವರಾಜ್ ಅವರ ಜಮೀನಿನಲ್ಲಿ ಕಳೆದ 5 ವರ್ಷಗಳ ಹಿಂದೆ ಅಡಕೆ ಸಸಿಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದರು.ಮಂಗಳವಾರ ರಾತ್ರಿ ದಾಳಿ ಮಾಡಿರುವ ಕಾಡು ಹಂದಿಗಳ ಗುಂಪು ಸುಮಾರು 70ಕ್ಕೂ ಅಧಿಕ ಅಡಕೆ ಗಿಡಗಳನ್ನು ಮುರಿದು ಹಾಕಿವೆ. ಹಂದಿಗಳ ಹಾವಳಿಯಿಂದ ರೈತರು ತೋಟದ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ಹರಸಾಹಸ ಪಡುವಂತಾಗಿದೆ.
ಇದುವರೆಗೂ ರಾಗಿ, ಭತ್ತ, ಜೋಳ, ಶೇಂಗಾ, ಮುಂತಾದ ಅಲ್ಪ ಕಾಲದ ಬೆಳೆಗಳ ಮೇಲೆ ದಾಳಿ ಮಾಡುತ್ತಿದ್ದ ಕಾಡು ಹಂದಿಗಳು ಈಗ ಅಡಕೆ ತೆಂಗು, ಬಾಳೆ ತೋಟದ ಗಿಡಗಳನ್ನು ಮುರಿದು ತಿಂದು ಹಾಕುತ್ತಿವೆ ಇದರಿಂದ ರೈತರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ.

Share This Article

ನಿಂಬೆ ಸಿಪ್ಪೆಗಳನ್ನು ಎಸೆಯುವ ತಪ್ಪನ್ನು ಮಾಡಬೇಡಿ!  ಅವುಗಳನ್ನು ಹೀಗೂ ಮರುಬಳಕೆ ಮಾಡಬಹುದು.. lemon peels

lemon peels: ಬೇಸಿಗೆಯಲ್ಲಿ ನಿಂಬೆ ರಸವನ್ನು ಹೆಚ್ಚಾಗಿ ಬಳಸಲಾಗುತ್ತದೆ. ಆದರೆ ನಿಂಬೆ ರಸದ ಜೊತೆಗೆ, ನಿಂಬೆ…

ಪಾರ್ಲರ್‌ ಹೋಗದೆ ಮನೆಯಲ್ಲಿಯೇ ಮುಖ ಪಳ ಪಳ ಹೊಳೆಯುವಂತೆ ಮಾಡಬೇಕಾ? ಹಾಗಾದ್ರೆ ಹೀಗೆ ಮಾಡಿ..Glow Skin

Glow Skin: ಮುಖ ನೋಡಲು ಪಳಪಳ ಹೊಳೆಯಬೇಕು ಎನ್ನುವ ಆಸೆ ಮಹಿಳೆಯರಿಗೆ ಇರುತ್ತದೆ. ಯಾವುದೇ ಪಾರ್ಟಿ…

ಮೀನು ಖರೀದಿಸುವಾಗ ತಾಜಾ ಮೀನುಗಳನ್ನು ಗುರುತಿಸುವುದು ಹೇಗೆ ಗೊತ್ತಾ? Fish

Fish: ಮೀನು ತಿನ್ನಲು ಬಲು ರುಚಿ ಹಾಗೆ ನಮ್ಮ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಆದರೆ ಹಳೆಯ…