ನವದೆಹಲಿ : ನಗರ ಮಾರುಕಟ್ಟೆ ಪ್ರದೇಶಗಳಲ್ಲಿ ಜನರು ಕೋವಿಡ್ ಪ್ರೊಟೊಕಾಲ್ ಮೀರಿ ಓಡಾಡುತ್ತಿರುವ ಬಗ್ಗೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ವಾಟ್ಸ್ಆ್ಯಪ್ನಲ್ಲಿ ಹರಿದಾಡುತ್ತಿರುವ ಚಿತ್ರಗಳಲ್ಲಿ ಜನರು ಮಾಸ್ಕ್ ತೊಡದೆ, ಸಾಮಾಜಿಕ ಅಂತರ ಪಾಲಿಸದೆ ಮಾರುಕಟ್ಟೆಗಳಲ್ಲಿ ಖರೀದಿಯಲ್ಲಿ ತೊಡಗಿದ್ದು, ಈ ಬಗ್ಗೆ ಕೋರ್ಟ್ ಸುಯೋ ಮೋಟೋ ವಿಚಾರಣೆ ಕೈಗೆತ್ತಿಕೊಂಡಿದೆ.
ರಾಷ್ಟ್ರ ರಾಜಧಾನಿಯಲ್ಲಿ ಕರೊನಾ ಹೆಚ್ಚಾಗಿ ಹರಡದಂತೆ ತಡೆಯಲು ಹೆಚ್ಚು ಕಠಿಣ ಕ್ರಮಗಳ ಅಗತ್ಯವಿದೆ ಎಂದಿರುವ ಕೋರ್ಟ್, ಕೇಂದ್ರ ಮತ್ತು ದೆಹಲಿ ಸರ್ಕಾರಗಳಿಗೆ ನೋಟೀಸ್ ಜಾರಿಗೊಳಿಸಿದೆ. ಈ ಬಗ್ಗೆ ಸ್ಟೇಟಸ್ ರಿಪೋರ್ಟ್ ಸಲ್ಲಿಸಲು ನಿರ್ದೇಶಿಸಿದೆ. ಜನಜಂಗುಳಿ ಮಾಡಿಕೊಂಡು ಈ ರೀತಿಯಾಗಿ ಕೋವಿಡ್ ಪ್ರೊಟೊಕಾಲ್ಅನ್ನು ಉಲ್ಲಂಘಿಸುವುದರಿಂದ ಮೂರನೇ ಅಲೆಯು ಬೇಗ ಬಂದು ಅಪ್ಪಿಳಿಸುವಂತೆ ಮಾಡಿದಂತಾಗುತ್ತದೆ. ಯಾವುದೇ ಸನ್ನಿವೇಶದಲ್ಲಿ ಅದಕ್ಕೆ ಅವಕಾಶ ಕೊಡಬಾರದು ಎಂದು ನ್ಯಾಯಮೂರ್ತಿಗಳಾದ ನವೀನ್ ಚಾವ್ಲ ಮತ್ತು ಆಶಾ ಮೆನನ್ ಅವರ ರಜಾಕಾಲೀನ ನ್ಯಾಯಪೀಠ ಹೇಳಿದೆ.
ಇದನ್ನೂ ಓದಿ: ಕೋಮುಸೌಹಾರ್ದ ಕೆಡಿಸುವ ಟ್ವೀಟ್ಸ್ : ಟ್ವಿಟರ್ ಇಂಡಿಯ ಎಂಡಿಗೆ ಪೊಲೀಸ್ ನೋಟೀಸ್
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಂಗಡಿಮುಂಗಟ್ಟುಗಳ ಮಾಲೀಕರಲ್ಲಿ ಜಾಗೃತಿ ಮೂಡಿಸಬೇಕು. ಮಾರುಕಟ್ಟೆ ಮತ್ತು ವ್ಯಾಪಾರಿಗಳ ಸಂಘಗಳೊಂದಿಗೆ ಸಭೆ ನಡೆಸಿ ಎಚ್ಚರಿಕೆ ವಹಿಸಬೇಕು ಎಂದು ಹೈಕೋರ್ಟ್ ಹೇಳಿದೆ. (ಏಜೆನ್ಸೀಸ್)
‘ವಿಶ್ವನಾಥ್ ಬಗ್ಗೆ ಮಾತಾಡಿದರೆ ನನ್ನ ಬಾಯಿ ಹೊಲಸು’ – ಹಳ್ಳಿ ಹಕ್ಕಿಗೆ ಕುಟುಕಿದ ರೇಣುಕಾಚಾರ್ಯ