More

    ಕರೊನಾ ಸಂಕಷ್ಟ ಮುಗಿಯುವವರೆಗೆ ಶಾಲೆ ತೆರೆಯಲ್ಲ; ಪಾಲಕರಿಗೆ ಭರವಸೆ ನೀಡಿದ್ಯಾರು?

    ನವದೆಹಲಿ: ಕರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲಾ- ಕಾಲೇಜುಗಳನ್ನು ಪುನಾರಂಭಿಸುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಸ್ಪಷ್ಟಪಡಿಸಿದ್ದಾರೆ.

    ರಾಷ್ಟ್ರ ರಾಜಧಾನಿಯಲ್ಲಿ ಕರೊನಾ ಸೋಂಕು ವ್ಯಾಪಿಸುವುದನ್ನು ಸಂಪೂರ್ಣವಾಗಿ ತಡೆಗಟ್ಟಲಾಗಿದೆ ಎಂಬುದು ಮನವರಿಕೆಯಾಗುವವರೆಗೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

    ಇದನ್ನೂ ಓದಿ; ಎರಡೇ ವಾರದಲ್ಲಿ 97 ಸಾವಿರ ಮಕ್ಕಳಲ್ಲಿ ಸೋಂಕು; ಶಾಲೆಗಳ ಮರು ಆರಂಭ ನಿರ್ಧಾರ ಹುಟ್ಟು ಹಾಕಿದೆ ಭಾರಿ ಚರ್ಚೆ 

    ದೆಹಲಿಯಲ್ಲಿ ಎರಡು ತಿಂಗಳ ಹಿಂದೆ ಇದ್ದ ಪರಿಸ್ಥಿತಿಗೆ ಹೋಲಿಸಿದಲ್ಲಿ ಈಗ ಸುಧಾರಿಸಿದೆ. ಇದಕ್ಕೆ ಕಾರಣವಾದ ಕೇಂದ್ರ ಸರ್ಕಾರವೂ ಸೇರಿ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುವುದಾಗಿ ಅವರು ಹೇಳಿದ್ದಾರೆ. ಕರೊನಾ ವಾರಿಯರ್ಸ್​, ವಿವಿಧ ಸಂಘ-ಸಂಸ್ಥೆಗಳು ಕೂಡ ಇದಕ್ಕೆ ಶ್ರಮ ವಹಿಸಿವೆ ಎಂದು ತಿಳಿಸಿದ್ದಾರೆ.

    ಹಲವು ಕ್ಷೇತ್ರಗಳ ಗಣ್ಯರು, ಸಾರ್ವಜನಿಕರು ಕೂಡ ಶಾಲೆಗಳನ್ನು ತೆರೆಯುವುದು ಬೇಡ ಎಂದೇ ಹೇಳಿದ್ದಾರೆ. ಜತೆಗೆ, ಮೆಸೇಜ್​ಗಳನ್ನು ಮಾಡುತ್ತಿದ್ದಾರೆ. ಕರೊನಾ ಸಂಕಷ್ಟ ಮುಗಿಯುವವರೆಗೆ ಶಾಲೆಗಳನ್ನು ತೆರೆಯುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.

    ಇದನ್ನೂ ಓದಿ; ಭಾರತೀಯರಿಗೆ ಶುಭಸುದ್ದಿ; ದೇಶೀಯ ಕರೊನಾ ಲಸಿಕೆ ಕೊವಾಕ್ಸಿನ್​ ಮಾನವರ ಬಳಕೆಗೆ ಸುರಕ್ಷಿತ; ಆರಂಭಿಕ ಯಶಸ್ಸು 

    ಮಕ್ಕಳ ಬಗ್ಗೆ ಪಾಲಕರು ಎಷ್ಟು ಕಾಳಜಿ ಹೊಂದಿದ್ದಾರೋ ಅಷ್ಟೇ ಕಾಳಜಿಯನ್ನು ಸರ್ಕಾರ ಕೂಡ ಹೊಂದಿದೆ. ಹೀಗಾಘಿ ಪೂಣ್ ಮನವರಿಕೆಯಾಗುವವರೆಗೆ ಶಾಲೆಗಳನ್ನು ತೆರಯಲ್ಲ ಎಂದಿದ್ದಾರೆ.

    ಕೇಂದ್ರ ಸರ್ಕಾರವೇ ವಿತರಿಸಲಿದೆ ಕರೊನಾ ಲಸಿಕೆ; ಸಾರ್ವಜನಿಕರಿಗೆ ಬೇಕಿಲ್ಲ ಆತಂಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts