ಎಐಸಿಸಿಯಲ್ಲಿ ಆಮೂಲಾಗ್ರ ಬದಲಾವಣೆ ಬೇಕು. ಪೂರ್ಣಾವಧಿಯ ಅಧ್ಯಕ್ಷರ ನೇಮಕವಾಗಬೇಕು ಎಂಬಿತ್ಯಾದಿ ವಿಚಾರಗಳನ್ನೊಳಗೊಂಡ ಪತ್ರವನ್ನು ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿಯವರಿಗೆ ಬರೆದಿದ್ದಾರೆ.
ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆಯೂ ನಡೆದಿದೆ. ಆದರೆ ಸಭೆ ನಡೆಯುತ್ತಿರುವಾಗ ರಾಹುಲ್ ಗಾಂಧಿ ಕಾಂಗ್ರೆಸ್ ಮುಖಂಡರಿಗೆ ಅಕ್ಷರಶಃ ಶಾಕ್ ಕೊಟ್ಟಿದ್ದಾರೆ. ಸರಿಯಾದ ಸಮಯ ನೋಡಿಕೊಂಡು, ಬಿಜೆಪಿ ಜತೆ ಸೇರಿ ಕುತಂತ್ರ ಮಾಡಿದ್ದೀರಿ. ಹಾಗಾಗೇ ಪತ್ರ ಬರೆದಿದ್ದೀರಿ ಎಂದು ನೇರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಕರೆಗೆ ಟ್ವೀಟ್ ಡಿಲೀಟ್ ಮಾಡಿದ್ರು ಸಿಬಲ್
ಇದೀಗ ಕಾಂಗ್ರೆಸ್ ಮುಖಂಡರೆಲ್ಲ ತಮ್ಮನ್ನು ತಾವು ಸಮರ್ಥಿಸಿಕೊಳ್ಳುತ್ತಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ತಿರುಗಿಬಿದ್ದರೆ ಪಕ್ಷದೊಳಗೆ ಸಂಪೂರ್ಣ ಅಲ್ಲೋಲಕಲ್ಲೋಲ ಉಂಟಾಗುತ್ತದೆ. ಹಾಗಾಗಿ ನಾಯಕರಿಗೆ ತಮ್ಮನ್ನು ಸಮರ್ಥಿಸಿಕೊಳ್ಳುವುದೊಂದೇ ದಾರಿ.
ಹಾಗೇ, ಪತ್ರಕ್ಕೆ ಸಹಿ ಹಾಕಿದವರಲ್ಲಿ ಒಬ್ಬರಾದ ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಅವರು ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಬಿಜೆಪಿ ಜತೆ ಸೇರಿ ಕಾಂಗ್ರೆಸ್ ವಿರುದ್ಧ ಪಿತೂರಿ ಮಾಡಿದ್ದು ಸಾಬೀತಾದರೆ, ಅದು ಸತ್ಯವೇ ಆದರೆ ನಾನು ಪಕ್ಷವನ್ನು ಬಿಟ್ಟುಬಿಡುತ್ತೇನೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಆರೋಪದಿಂದ ಸಿಟ್ಟಾಗಿರುವ ಗುಲಾಂ ನಬಿ ಆಜಾದ್, ನಮ್ಮ ವಿರುದ್ಧ ಆರೋಪ ಸಾಬೀತಾದರೆ ನಾನು ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ. ಹಾಗೇ, ಕಪಿಲ್ ಸಿಬಲ್ ಕೂಡ ರಾಹುಲ್ ಗಾಂಧಿ ಆರೋಪಕ್ಕೆ ಖಡಕ್ ಪ್ರತಿಕ್ರಿಯೆ ನೀಡಿ, ಬಳಿಕ ಅದನ್ನು ಡಿಲೀಟ್ ಮಾಡಿದ್ದಾರೆ. (ಏಜೆನ್ಸೀಸ್)
ಬಿಜೆಪಿ ಜತೆ ಸೇರ್ಕೊಂಡು ಕುತಂತ್ರ ಮಾಡ್ತಿದ್ದೀರಲ್ಲ- ಪತ್ರಬರೆದವರ ವಿರುದ್ಧ ರಾಗಾ ಆಕ್ರೋಶ