More

    ಈ ಬಾರಿ ಆರ್​ಸಿಬಿ ಕಪ್​ ಗೆಲ್ಲುತ್ತಾ; ಸುರೇಶ್​ ರೈನಾ ಕೊಟ್ಟ ಉತ್ತರ ವೈರಲ್

    ನವದೆಹಲಿ: ವಿಶ್ವದ ಶ್ರೀಮಂತ ಕ್ರಿಕೆಟ್​ ಟೂರ್ನಿಗಳಲ್ಲಿ ಒಂದಾದ ಇಂಡಿಯನ್​ ಪ್ರೀಮಿಯರ್​ ಲೀಗ್​ ಆರಂಭವಾಗುವುದಕ್ಕೆ ದಿನಗಣನೆ ಶುರುವಾಗಿದ್ದು, ಮಾರ್ಚ್​ 22 ರಂದು ಆರಂಭವಾಗಲಿರುವ ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ಮುಖಾಮುಖಿಯಾಗಲಿವೆ.

    ಐಪಿಎಲ್​ ವೇಳಾಪಟ್ಟಿ ಕುರಿತು ಮಾತನಾಡಿರುವ ಮಾಜಿ ಕ್ರಿಕೆಟಿಗ ಸುರೇಶ್​ ರೈನಾ ಈ ಒಂದು ತಂಡ ಕಪ್​ ಗೆಲ್ಲುವುದನ್ನು ನೋಡಲು ಕಾಯುತ್ತಿದ್ದೇನೆ. ಈ ಕಾಯುವಿಕೆಯ ಸಮಯ ಮೀರಿದೆ ಎಂದು ಹೇಳಿದ್ದಾರೆ.

    ವಿರಾಟ್​ ಕೊಹ್ಲಿ ಹಾಗೂ ಆರ್​ಸಿಬಿ ಅರ್ಹ

    ಖಾಸಗಿ ಸುದ್ದಿ ವಾಹಿನಿ ಒಂದರ ಸಂದರ್ಶನದಲ್ಲಿ ಮಾತನಾಡಿದ ಸುರೇಶ್​ ರೈನಾ, ಕಳೆದ 16 ಆವೃತ್ತಿಗಳಲ್ಲಿ ವಿರಾಟ್​ ಕೊಹ್ಲಿ ಆರ್​ಸಿಬಿ ಪರ ಕಠಿಣ ಪರಿಶ್ರಮ ಹಾಗೂ ಶ್ರದ್ಧೆಯಿಂದ ಕೆಲಸ ಮಾಡಿದ್ದಾರೆ. ಅವರು ಕಪ್​ ಗೆಲ್ಲಲು ಅರ್ಹರು. ಕಳೆದ ಆವೃತ್ತಿಯಲ್ಲಿ ಸಿಎಸ್​ಕೆ ಗೆದ್ದಿದೆ. ಈ ವರ್ಷ ಕಪ್​ ಗೆಲ್ಲದ ತಂಡ ಚಾಂಪಿಯನ್​ ಆಗಬೇಕೆಂದು ನಾನು ಬಯಸುತ್ತೇನೆ.

    ಇದನ್ನೂ ಓದಿ: ಅಸಮಾಧಾನ ಇರುವುದು ನಿಜ; ಮತದಾನಕ್ಕೆ ಗೈರು ಹಾಜರಾಗಿದ್ದಕ್ಕೆ ಕಾರಣ ಬಿಚ್ಚಿಟ್ಟ ಶಿವರಾಮ್​ ಹೆಬ್ಬಾರ್

    ಅದರಂತೆ ವಿರಾಟ್ ಕೊಹ್ಲಿ ಮತ್ತು ಆರ್‌ಸಿಬಿ ಟ್ರೋಫಿಯನ್ನು ಗೆಲ್ಲಬೇಕೆಂದು ನಾನು ಬಯಸುತ್ತೇನೆ. ಈ ಕಾಯುವಿಕೆಯ ಸಮಯ ಮೀರಿದೆ. ಈ ಸಲವಾದರೂ ಆರ್​ಸಿಬಿ ಚಾಂಪಿಯನ್ ಪಟ್ಟಕ್ಕೇರಲಿ ಎಂದು ಮಾಜಿ ಕ್ರಿಕೆಟಿಗ ಸುರೇಶ್​ ರೈನಾ ಆಶಿಸಿದ್ದಾರೆ.

    ಇದೀಗ ಆರ್​ಸಿಬಿ 17ನೇ ಸೀಸನ್​ ಆರಂಭಕ್ಕೆ ಸಜ್ಜಾಗಿ ನಿಂತಿದೆ. ಈ ಬಾರಿಯಾದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಗೆಲ್ಲುವ ಮೂಲಕ 16 ವರ್ಷಗಳ ಸುದೀರ್ಘ ಕಾಯುವಿಕೆಯನ್ನು ಅಂತ್ಯಗೊಳಿಸುತ್ತದೆಯೇ ಎಂದು ಕಾದು ನೋಡಬೇಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts