ಬೆಂಗಳೂರು: ರೋಡ್ ರೇಜ್ ಪ್ರಕರಣ ಸಂಬಂಧ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮತ್ತು ಮಧುಮತಿ ದಂಪತಿ ಬೈಯಪ್ಪನಹಳ್ಳಿ ಠಾಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ.
ಏ.21ರ ಬೆಳಗ್ಗೆ ಟಿನ್ ್ಯಾಕ್ಟರಿ ಬಳಿ ನಡೆದಿದ್ದ ರೋಡ್ ರೇಜ್ ಪ್ರಕರಣದಲ್ಲಿ ಬೈಕ್ ಸವಾರ ವಿಕಾಸ್ ಕುಮಾರ್ ನೀಡಿದ ದೂರಿನ ಮೇರೆಗೆ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ವಿಂಗ್ ಕಮಾಂಡರ್ ಶಿಲಾದಿತ್ಯ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದರು.

ಇದೇ ವೇಳೆ ಮಧುಮತಿ ನೀಡಿದ ದೂರಿನ ಮೇರೆಗೆ ಬೈಕ್ ಸವಾರ ವಿಕಾಸ್ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಸಾಕ್ಷಾೃಧಾರ ನೀಡುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಅಲ್ಲದೆ, ಕೊಲೆ ಯತ್ನ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ವಿಂಗ್ ಕಮಾಂಡರ್ಗೂ ಪೊಲೀಸರು ಸೂಚಿಸಿದ್ದರು.
ಮತ್ತೊಂದೆಡೆ, ಹೈಕೋರ್ಟ್ ಸಹ ವಿಂಗ್ ಕಮಾಂಡರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು. ತನಿಖೆ ಮುಂದುವರಿಸಲು ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಶಿಲಾದಿತ್ಯ ಮತ್ತು ಮಧುಮತಿ ದಂಪತಿ ಬೈಯಪ್ಪನಹಳ್ಳಿ ತನಿಖಾಧಿಕಾರಿ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಕಾರಿನ ಡ್ಯಾಷ್ ಬೋರ್ಡ್ ಕ್ಯಾಮರಾದಲ್ಲಿ ಸೆರೆಯಾಗಿದ್ದ ದೃಶ್ಯಾವಳಿಯನ್ನು ಒದಗಿಸಿದ್ದಾರೆ.