More

    ಕ್ರೀಡೆಯಲ್ಲಿ ಸೋಲು- ಗೆಲವು ಸಾಮಾನ್ಯ

    ಕ್ರೀಡೆಯಲ್ಲಿ ಸೋಲು- ಗೆಲವು ಸಾಮಾನ್ಯ. ಪ್ರತಿಯೊಬ್ಬರೂ ಕ್ರೀಡಾ ಸ್ಫೂರ್ತಿಯಿಂದಲೇ ಭಾಗವಹಿಸಬೇಕು ಎಂದು ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಹೇಳಿದರು.

    ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗ, ಹುಣಸೂರು ಸರ್ಕಾರಿ ಮಹಿಳಾ ಕಾಲೇಜು ವತಿಯಿಂದ ಸ್ಪೋರ್ಟ್ಸ್ ಪೆವಿಲಿಯನ್ ಹಾಕಿ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಹಾಕಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

    ರಾಷ್ಟ್ರೀಯ ಕ್ರೀಡೆಯಾದ ಹಾಕಿಯಲ್ಲಿ ಪಿ. ಧ್ಯಾನ್‌ಚಂದ್ ಅವರ ಹೆಸರು ಅಜರಾಮರ. ರಾಷ್ಟ್ರೀಯ ಹಾಕಿಗೆ ಕೊಡಗಿನ ಕೊಡುಗೆ ಅಪಾರ. ಪ್ರಸ್ತುತ ಪುರುಷ ಹಾಗೂ ಮಹಿಳಾ ಹಾಕಿಯಲ್ಲಿ ದೇಶದ ಸಾಧನೆ ಉತ್ತಮವಾಗಿದೆ. ಕ್ರೀಡೆಯಲ್ಲಿ ಸೋಲು- ಗೆಲವು ಸಾಮಾನ್ಯ. ಪ್ರತಿಯೊಬ್ಬರೂ ಕ್ರೀಡಾ ಸ್ಫೂರ್ತಿಯಿಂದಲೇ ಭಾಗವಹಿಸಬೇಕು ಎಂದು ಅವರು ಸಲಹೆ ಮಾಡಿದರು.

    ಮೈವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಸಿ.ವೆಂಕಟೇಶ್, ಉಪ ನಿರ್ದೇಶಕ ಡಾ.ಪಿ.ಕೃಷ್ಣಯ್ಯ, ಹಾಕಿ ತರಬೇತುದಾರ ಅಶೋಕ್ ವೈ. ತಿಪ್ಪಸುಂದರ್, ಪತ್ರಕರ್ತ ಧರ್ಮಾಪುರ ನಾರಾಯಣ್ ಮುಖ್ಯ ಅತಿಥಿಗಳಾಗಿದ್ದರು.

    ಹುಣಸೂರು ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪುಟ್ಟಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕೆ.ಎಸ್. ಭಾಸ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವರಾಜ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಎಂ. ರುದ್ರಯ್ಯ, ಹುಣಸೂರು ಸರ್ಕಾರಿ ಮಹಿಳಾ ಕಾಲೇಜಿನ ಕರುಣಾಕರ್, ಕುಮಾರ್ ಇದ್ದರು. ಮಹಾಜನ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಭಾಸ್ಕರ್ ಸ್ವಾಗತಿಸಿದರು. ಮೈವಿವಿ ಸ್ನಾತಕೋತ್ತರ ದೈಹಿಕ ಶಿಕ್ಷಣ ಕೌನ್ಸಿಲ್‌ನ ಸಹಾಯಕ ನಿರ್ದೇಶಕ ರವಿ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts