More

    ಆಪ್​ ಭರ್ಜರಿ ಬಹುಮತ: ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿಗೆ ಕೇಜ್ರಿವಾಲ್​ ಪ್ರತಿಕ್ರಿಯೆ ಹೀಗಿತ್ತು…

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಆಮ್​ ಆದ್ಮಿ ಪಕ್ಷ ಹಾಗೂ ಮುಖ್ಯಸ್ಥ ಅರವಿಂದ್​ ಕೇಜ್ರಿವಾಲ್​ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

    ಟ್ವೀಟ್​ ಮೂಲಕ ಶುಭಕೋರಿರುವ ಪ್ರಧಾನಿ, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಆಪ್​ ಮತ್ತು ಅರವಿಂದ್​ ಕೇಜ್ರಿವಾಲ್​ ಅವರಿಗೆ ಅಭಿನಂದನೆಗಳು. ದೆಹಲಿ ಜನತೆಯ ಮಹತ್ವಾಕಾಂಕ್ಷೆಗಳನ್ನು ಈಡೇರಿಸಲಿ ಎಂದು ಶುಭಕೋರುವುದಾಗಿ ತಿಳಿಸಿದ್ದಾರೆ.

    ಇದಕ್ಕೆ ಟ್ವೀಟ್​ ಮೂಲಕವೇ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್​, ತುಂಬಾ ಧನ್ಯವಾದಗಳು ಸರ್. ನಮ್ಮ ರಾಜಧಾನಿ ನಗರವನ್ನು ನಿಜವಾದ ವಿಶ್ವದರ್ಜೆಯ ನಗರವನ್ನಾಗಿ ಮಾಡಲು ನಿಮ್ಮೊಂದಿಗೆ ತುಂಬಾ ಹತ್ತಿರದಿಂದ ಕಾರ್ಯನಿರ್ವಹಿಸಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

    ಇನ್ನು ಚುನಾವಣಾ ಫಲಿತಾಂಶಕ್ಕೆ ಬರುವುದಾರೆ, ಒಟ್ಟು 70 ಸ್ಥಾನಗಳಲ್ಲಿ ಈಗಾಗಲೇ 48 ಸ್ಥಾನಗಳಲ್ಲಿ ಗೆಲವು ಸಾಧಿಸಿರುವ ಆಪ್​ ಉಳಿದ 14 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ 6 ಸ್ಥಾನಗಳಲ್ಲಿ ವಿಜಯೋತ್ಸವ ಆಚರಿಸಿದ್ದು, 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಉಳಿದಂತೆ ಕಾಂಗ್ರೆಸ್​ ಖಾತೆ ತೆರೆಯುವಲ್ಲಿ ವಿಫಲವಾಗಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts