More

    ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!

    ಗದಗ: ಸರ್ಕಾರಿ ಅಧಿಕಾರಿಗಳು ನಮ್ಮ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ತೀವ್ರ ಬೇಸರಕ್ಕೆ ಒಳಗಾದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಗದಗ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.

    ಸುಮಿತ್ರಾ (34) ಎಂಬಾಕೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆಗೆ ಯತ್ನ. ಜಿಲ್ಲಾಡಳಿತ ನಮ್ಮ ಸಂಕಷ್ಟ ಕೇಳುತ್ತಿಲ್ಲ ಅಂತ ಈ ಮಹಿಳೆ ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ.

    ನಿರಂತರ ಮಳೆಯಿಂದಾಗಿ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಹತ್ತು ದಿನಗಳಿಂದ ‌ಊಟವಿಲ್ಲದೇ ಒದ್ದಾಡುತ್ತಿದ್ದೇವೆ. ಯಾರೂ ನಮ್ಮ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಅಲ್ಲಿ ಸಾಯೋಕಿಂತ ಇಲ್ಲೇ ಸಾಯುತ್ತೇನೆ ಅಂತ ಬೇಸರ ವ್ಯಕ್ತಪಡಿಸಿದ ಮಹಿಳೆ, ಕೆರೆಗೆ ಹಾರಿ ಧುಮುಕಿದ್ದಾಳೆ. ಕೆರೆಗೆ ಇಳಿದ ಮಹಿಳೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿಯೂ ಮಹಿಳೆ ನಾ ಸಾಯಿತೀನಿ ಬಿಡಿ ಅಂತ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾಳೆ.

    ಪತಿಯ ಕಾಲನ್ನು ಕತ್ತರಿಸಿ ಪತ್ನಿಯ ಕೈಗಿಟ್ರು ಆಸ್ಪತ್ರೆ ಸಿಬ್ಬಂದಿ!; ತಬ್ಬಿಬ್ಬಾದ ಮಹಿಳೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts