ಬೆಂಗಳೂರು: ಅಪಾರ್ಟ್ಮೆಂಟ್ನ ಕುಡಿಯುವ ನೀರಿನ ಟ್ಯಾಂಕ್ಗೆ ಬಿದ್ದು ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕನ್ಯೂ ಟೌನ್ನ ನಾಲ್ಕನೆ ಹಂತದಲ್ಲಿ ನಡೆದಿದೆ.
ಗೌರಿ ನಾಗರಾಜ್ ಮೃತ ಮಹಿಳೆ. ಹಣಕಾಸು ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶುಕ್ರವಾರ ಮನೆಯಿಂದ ನಾಪತ್ತೆಯಾಗಿದ್ದರು. ಬಳಿಕ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಭಾನುವಾರ ಮಹಿಳೆಯ ಶವ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಪತ್ತೆಯಾಗಿದೆ.
ಇದನ್ನೂ ಓದಿ: ಇನ್ಮುಂದೆ ಲಾಕ್ಡೌನ್ ಬಗ್ಗೆ ಚರ್ಚಿಸುವುದೇ ಇಲ್ಲ: ಸಿಎಂ ಬಿ.ಎಸ್.ಯಡಿಯೂರಪ್ಪ
ಆತಂಕಕಾರಿಯೆಂದರೆ ಕಳೆದ ಮೂರು ದಿನದಿಂದ ಅಪಾರ್ಟ್ಮೆಂಟ್ ನಿವಾಸಿಗಳು ಸ್ನಾನಕ್ಕೆ, ಕುಡಿಯುವುದಕ್ಕೆ ಹಾಗೂ ಮನೆ ಕೆಲಸಕ್ಕೆ ಎಲ್ಲದಕ್ಕು ಅದೇ ನೀರು ಬಳಸಿದ್ದರು. ಇದೀಗ ಟ್ಯಾಂಕ್ನಲ್ಲಿ ಶವ ಪತ್ತೆಯಾದ ಬೆನ್ನಲ್ಲೆ ಭಯಭೀತಗೊಂಡಿದ್ದಾರೆ. ಅಪಾರ್ಟ್ಮೆಂಟ್ನಲ್ಲಿ ಸುಮಾರು ಅರವತ್ತಕ್ಕೂ ಅಧಿಕ ಮಂದಿ ವಾಸಿಸುತ್ತಿದ್ದಾರೆ.
ಸದ್ಯ ಮೃತ ದೇಹ ಹೊರತೆಗೆದು ಮರಣೊತ್ತರ ಪರೀಕ್ಷೆಗೆ ಕಳಿಸಲಾಗಿದೆ. ಮಹಿಳೆಗೆ ಕರೊನಾ ಇದ್ಯಾ ಇಲ್ವಾ ಎಂಬುದರ ಬಗ್ಗೆ ತಪಾಸಣೆ ಮಾಡಲಾಗುತ್ತಿದೆ. ಘಟನೆಯ ಸಂಬಂಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡೆತ್ನೋಟ್ ಪತ್ತೆ
ಮೃತ ಗೌರಿ ಸುಮಾರು ಹತ್ತು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿದ್ದು, ಜಯಸೂರ್ಯ ಬಿಲ್ಡರ್ಸ್ ಮೇಲೆ ಆರೋಪ ಮಾಡಿದ್ದಾರೆ. ಹಣ ಕೊಡಬೇಕು ಎಂದು ಜಯಸೂರ್ಯ ಬಿಲ್ಡರ್ಸ್ನ ಮೂರು ಸದಸ್ಯರಾದ ಗೋಪಿ, ಭಾರ್ಗವ್ ಹಾಗೂ ದೇವರಾಜೇಂದ್ರಪ್ಪ ಎಂಬುವರ ವಿರುದ್ಧ ದೂರಿದ್ದಾರೆ. ಮೃತ ಗೌರಿನಾಗರಾಜ್ ಸೈಟ್ ಕೊಡಿಸುವ ವ್ಯವಹಾರ ಮಾಡುತ್ತಿದ್ದರು. ಸದ್ಯ ಮಹಿಳೆಯ ಡೆತ್ ನೋಟ್ ಆಧಾರದ ಮೇಲೆ ಜಯಸೂರ್ಯ ಬಿಲ್ಡರ್ಸ್ನ ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ. (ದಿಗ್ವಿಜಯ ನ್ಯೂಸ್)
ಇದನ್ನೂ ಓದಿ: ಒಂಟಿತನಕ್ಕೆ ಬೈ ಬೈ ಹೇಳಿದ್ರು ಹಾಟ್ ಬೆಡಗಿ ಪೂನಂ ಪಾಂಡೆ; ಬಹುಕಾಲದ ಗೆಳೆಯನ ಜತೆ ಎಂಗೇಜ್ಡ್..