ದೇವನಹಳ್ಳಿ: ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ನಡುವೆ ಅನುಮಾನ ಉಂಟಾಗಿ, ಕಿರುಕುಳಕ್ಕೆ ತಿರುಗಿ ಅದೀಗ ಒಬ್ಬರ ಸಾವಿನಲ್ಲಿ ಕೊನೆಗೊಂಡಿದೆ. ಪತಿಯ ಅನುಮಾನ ಹಾಗೂ ಕಿರುಕುಳ ಎದುರಿಸಲಾಗದೆ ಪತ್ನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ನಿವಾಸಿ ದೀಪ (27) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಾರ್ಪೆಂಟರ್ ಆಗಿರುವ, ಪತಿ ಮೋಹನ್ಕುಮಾರ್ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ.
ಕಳೆದ 7 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಇಬ್ಬರ ಮಧ್ಯೆ ಮದುವೆಯಾದ ಮೂರು ವರ್ಷಗಳ ಬಳಿಕ ಭಿನ್ನಾಭಿಪ್ರಾಯ ಉಂಟಾಗಿತ್ತು. ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ ಪತಿ, ತವರು ಮನೆಯಿಂದ ಹಣ ತರುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ದಂಪತಿ ಮಧ್ಯೆ ಕುಟುಂಬಸ್ಥರು ಎರಡು ಸಲ ರಾಜಿ ಪಂಚಾಯಿತಿ ನಡೆಸಿದ್ದರು. ಕಳೆದ ವಾರ ನಡೆದ ಎರಡನೇ ರಾಜಿ ಬಳಿಕ ದೀಪಾಳನ್ನು ಕುಟುಂಬಸ್ಥರು ಗಂಡನ ಮನೆಗೆ ಕಳಿಸಿದ್ದರು. ಆದರೆ ಗಂಡನ ಮನೆಗೆ ಬಂದ ನಾಲ್ಕು ದಿನಕ್ಕೆ ಗೃಹಿಣಿ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದಕ್ಕೆ ಗಂಡನ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ಕು ತಿಂಗಳಿನಿಂದ ಸ್ನಾನವನ್ನೇ ಮಾಡದ ಯುವತಿ; ಫ್ಲ್ಯಾಟ್ನಿಂದಲೇ ಹೊರಹಾಕಿದ ರೂಮ್ಮೇಟ್
ದತ್ತಪೀಠದ ದಾರಿಯಲ್ಲಿ ಮೊಳೆಗಳು; ಭಕ್ತರ ವಾಹನಗಳನ್ನು ಪಂಕ್ಚರ್ ಆಗಿಸುವ ಉದ್ದೇಶ?