ಅಂತ್ಯಸಂಸ್ಕಾರದ ಬಳಿಕ ವಾಗ್ವಾದ: ಆಕೆಯ ಸಾವಿಗೆ ಕಾರಣ ಹೊಟ್ಟೆನೋವೋ, ಆತನೋ?

ಬಳ್ಳಾರಿ: ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಆಕೆಯ ಸಾವಿನ ಕುರಿತಂತೆ ಈಗ ವಿವಾದ ಉಂಟಾಗಿದೆ. ಆಕೆ ಸತ್ತಿದ್ದು ಹೊಟ್ಟೆನೋವಿನಿಂದಾಗಿಯೋ ಅಥವಾ ಗಂಡನಿಂದಾಗಿಯೋ ಎಂಬ ಕುರಿತು ವಾಗ್ವಾದ ನಡೆಯಲಾರಂಭಿಸಿದ್ದು, ಪ್ರಕರಣ ಕಗ್ಗಂಟಾಗಿ ಪರಿಣಮಿಸಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಂಜಲಿ ಎಂಬ ಗೃಹಿಣಿಯ ಶವ ನಿನ್ನೆ ನೇಣು ಹಾಕಿದ ಸ್ಥಿತಿಯಲ್ಲಿ ಮನೆಯಲ್ಲೇ ಕಂಡುಬಂದಿತ್ತು. ಆಕೆ ಹೊಟ್ಟೆನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ಆಕೆಯದ್ದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಗ್ರಾಮಸ್ಥರಿಂದ … Continue reading ಅಂತ್ಯಸಂಸ್ಕಾರದ ಬಳಿಕ ವಾಗ್ವಾದ: ಆಕೆಯ ಸಾವಿಗೆ ಕಾರಣ ಹೊಟ್ಟೆನೋವೋ, ಆತನೋ?