ಚಿಕಿತ್ಸೆ ನೀಡುತ್ತಿದ್ದ ವೈದ್ಯೆಗೆ ಚಾಕುವಿನಿಂದ ಇರಿದು ಹತ್ಯೆ!

ಕೊಲ್ಲಂ: ವೈದ್ಯಕೀಯ ಚಿಕಿತ್ಸೆಗೆಂದು ಪೊಲೀಸರು ಕರೆತಂದಿದ್ದ ಆರೋಪಿಯೊಬ್ಬ ಚಿಕಿತ್ಸೆ ನೀಡುತ್ತಿದ್ದ ವ್ಯದ್ಯೆಯನ್ನು ಇರಿದು ಕೊಂದಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟಾರಕ್ಕರ ತಾಲ್ಲೂಕು ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯೆ ವಂದನಾ ದಾಸ್​(22) ಮೃತ ದುರ್ದೈವಿ ಎಂದು ತಿಳಿದು ಬಂದಿದ್ದು ಆರೋಪಿ ಸಂದೀಪ್(42)​ಗೆ ಚಿಕಿತ್ಸೆ ನೀಡುವ ವೇಳೆ ಇರಿದು ಕೊಂದಿದ್ದಾನೆ. ರಾಜ್ಯಾದ್ಯಂತ ಪ್ರತಿಭಟನೆ ವೈದ್ಯೆಯ ಹತ್ಯೆ ವಿಚಾರ ಬೆಳಕಿಗೆ ಬರುತ್ತಿದ್ದಂತೆ ರಾಜ್ಯಾದ್ಯಂತ ಡಾಕ್ಟರ್​ಗಳು ಮುಷ್ಕರಕ್ಕೆ ಮುಂದಾಗಿದ್ದು ಮೇ 11ರಂದು ಒಂದು ದಿನದ ಧರಣಿಗೆ ಕರೆ ನೀಡಿದ್ಧಾರೆ. ಈ ಕುರಿತು ಪ್ರತಿಕ್ರಿಯಿಸಿರುವ … Continue reading ಚಿಕಿತ್ಸೆ ನೀಡುತ್ತಿದ್ದ ವೈದ್ಯೆಗೆ ಚಾಕುವಿನಿಂದ ಇರಿದು ಹತ್ಯೆ!