ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಮಹಿಳೆಯೊಬ್ಬರ ಕತ್ತುಕೊಯ್ದು ಕೊಲೆ ಮಾಡಿರುವ ಭಯಾನಕ ಘಟನೆ ದಂಡುಪಾಳ್ಯ ಗ್ಯಾಂಗ್ ಮಾದರಿಯ ಕೊಲೆಯನ್ನು ನೆನಪಿಸುವಂತಿದೆ.
ಶ್ರೀರಂಗಪಟ್ಟಣದ ಲಾಡ್ಜ್ ಒಂದರಲ್ಲಿ ಘಟನೆ ನಡೆದಿದೆ. ನಿನ್ನೆ ಬೆಳಗ್ಗೆ 10 ಗಂಟೆ ಸುಮಾರಿಗೆ ಜೋಡಿಯೊಂದು ಲಾಡ್ಜ್ಗೆ ಆಗಮಿಸಿತ್ತು. ಜತೆಗಿದ್ದ ಮಹಿಳೆಯನ್ನು ಆಗಂತುಕನೊಬ್ಬ ರಾತ್ರಿಯೇ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಒಂದು ಗಂಟೆಗೆ ಒಂದು ಲಕ್ಷ ರೂ. ಕೇಳಿದ ನಟಿ ಶ್ರುತಿ ಹಾಸನ್…!
ಜೋಡಿ ಇದ್ದ ರೂಮಿನಿಂದ ರಕ್ತ ಹೊರ ಬರುತ್ತಿದ್ದುದ್ದನ್ನು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಕತ್ತು ಕೂಯ್ದು ಆಗಂತುಕ ಚಾಕುವನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದಾನೆ. ಮಹಿಳೆಯ ಶವ ಬೋರಲಾಗಿ ಮೈಮೇಲೆ ಬಟ್ಟೆಯೇ ಇಲ್ಲದ ಸ್ಥಿತಿಯಲ್ಲಿ ಬಿದ್ದಿರುವಂತೆ ಪತ್ತೆಯಾಗಿದೆ.
ಈ ಘಟನೆಯಿಂದ ಶ್ರೀರಂಗಪಟ್ಟಣ ಜನತೆ ಬೆಚ್ಚಿಬಿದ್ದಿದೆ. ಮೃತಳ ಬಗ್ಗೆ ಇನ್ನು ಮಾಹಿತಿ ಲಭ್ಯವಾಗಿಲ್ಲ. ಶ್ರೀರಂಗಪಟ್ಟಣ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖಾ ನಂತರವಷ್ಟೇ ಪ್ರಕರಣದ ಅಸಲಿಯತ್ತು ಬಯಲಾಗಲಿದೆ. (ದಿಗ್ವಿಜಯ ನ್ಯೂಸ್) ಇದನ್ನೂ ಓದಿ: ಮಹಿಳಾ ಅಕೌಂಟ್ಸ್ ಸೂಪರಿಂಡೆಂಟ್ ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನ
VIDEO| ಕೆಲ ಖದೀಮರಲ್ಲೂ ದೊಡ್ಡ ಮನಸ್ಸಿದೆ ಎಂಬುದಕ್ಕೆ ಈ ವಿಡಿಯೋನೇ ಸಾಕ್ಷಿ: ನೋಡ್ದಿದ್ರೆ ನಿಮಗೇ ನಷ್ಟ!