ಬೆಂಗಳೂರು: ಕಾಮಿಡಿ ಕಿಲಾಡಿಗಳು ಮೂಲಕ ಕರ್ನಾಟಕ ಜನತೆಯ ಮನದಲ್ಲಿ ಮನೆ ಮಾಡಿರುವ ಹಾಸ್ಯ ನಟ ಶಿವರಾಜ್ ಕೆ.ಆರ್. ಪೇಟೆ ವಿರುದ್ಧ ಮಹಿಳೆಯೊಬ್ಬರು ದೂರು ದಾಖಲಿಸಿರುವುದಾಗಿ ವರದಿಯಾಗಿದೆ.
ಶಾರದಾ ಬಾಯಿ ಎಂಬ ಮಹಿಳೆ ನಗರದ ಸುಬ್ರಹ್ಮಣ್ಯನಗರ ಠಾಣೆಯಲ್ಲಿ ಶಿವರಾಜ್ ಕೆ.ಆರ್. ಪೇಟೆ ವಿರುದ್ಧ ದೂರು ದಾಖಲಿಸಿದ್ದಾರೆ. ನನ್ನನ್ನು ಅವಾಚ್ಯ ಪದಗಳಿಂದ ನಿಂದಿಸಿ, ಅವಮಾನಿಸಿದ್ದಾರೆ ಮತ್ತು ಅನುಚಿತವಾಗಿ ವರ್ತಿಸಿದ್ದಾರೆ. ಹೀಗಾಗಿ ಶಿವರಾಜ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಶಾರದಾ ಬಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಏನಿದು ಪ್ರಕರಣ?
ಈ ಘಟನೆ ಮಾರ್ಚ್ 30ರಂದು ನಡೆದಿದೆ. ಎಂದಿನಂತೆ ಶಾರಾದ ಬಾಯಿ ಅವರು ಬೆಳಗ್ಗೆ 9.30ಕ್ಕೆ ಕೆಲಸಕ್ಕೆ ಹೋಗುವಾಗ ರಾಜ್ಕುಮಾರ್ ರಸ್ತೆಯ 10 ಕ್ರಾಸ್ನ ಪೆಟ್ರೋಲ್ ಬಂಕ್ ಬಳಿ ಅವರ ವಾಹನಕ್ಕೆ ಕಾರೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಈ ವೇಳೆ ಶಾರದಾ ಅವರು ಕೋಪದಿಂದ ತಿರುಗಿ ನೋಡಿದಾಗ ಕಾರಿನಲ್ಲಿದ್ದ ಶಿವರಾಜ್ ಕೆ.ಆರ್. ಪೇಟೆ, ಯಾವಳೆ ನೀನು? ಅಲ್ಲಾಡಿಸಿಕೊಂಡು ಹೋಗ್ತಿದ್ದೀಯಾ ಎಂದು ನಿಂದಿಸಿದ್ದಲ್ಲದೆ, ಕಾರಿನಲ್ಲಿದ್ದ ತನ್ನ ಸ್ನೇಹಿತರ ಜತೆ ನಗಾಡಿಕೊಂಡು ಹೋಗಿದ್ದಾರೆ. ಒಬ್ಬ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿರುವ ಶಿವರಾಜ್ ಕೆ.ಆರ್. ಪೇಟೆ ವಿರುದ್ಧ ಕ್ರಮ ಜರುಗಿಸುವಂತೆ ಶಾರದಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಶಾರದಾ ಅವರು ನೀಡಿದ ದೂರಿನ ಮೇರೆಗೆ ನಟ ಶಿವರಾಜ್ ಕೆ.ಆರ್. ಪೇಟೆ ವಿರುದ್ಧ ಎನ್ಸಿಆರ್ ದಾಖಲಿಸಿಕೊಂಡ ಸುಬ್ರಹ್ಮಣ್ಯ ನಗರ ಪೊಲೀಸರು ವಿಚಾರಣೆಗೆ ಬರುವಂತೆ ಶಿವರಾಜ್ ಅವರಿಗೆ ನೋಟಿಸ್ ನೀಡಿದ್ದರು. ನಿನ್ನೆ ಬೆಳಗ್ಗೆ ಶಿವರಾಜ್ ಕೆ ಆರ್ ಪೇಟೆ ವಿಚಾರಣೆಗೆ ಹಾಜರಾಗಿದ್ದರು. ಇದೇ ವೇಳೆ ಮಹಿಳೆಯನ್ನೂ ಠಾಣೆಗೆ ಕರೆಸಿ ಈ ಪ್ರಕರಣವನ್ನು ಬಗೆಹರಿಸಿ ಕಳಿಸಿದ್ದಾರೆ ಎಂದು ತಿಳಿದುಬಂದಿದೆ.
ಸಾಕು ನಿಲ್ಲಿಸ್ರಯ್ಯ ನಿಮ್ಮ ಕೈಮುಗಿತೀನಿ! ಕೊನೆಗೂ ಮಧ್ಯಪ್ರವೇಶ ಮಾಡಿದ ರೋಹಿತ್ ಶರ್ಮ
ಭಿಕ್ಷುಕನ ಬದುಕನ್ನೇ ಬದಲಿಸಿತು ಪಿಕೆ ಸಿನಿಮಾದ 5 ಸೆಕೆಂಡ್ ದೃಶ್ಯ! ಇದು ರೀಲ್ ಅಲ್ಲ, ರಿಯಲ್ ಸ್ಟೋರಿ