More

    ಸಾಲ ಪಡೆದವರು ಹಣದ ಜತೆ ಮಾನ ಕೂಡ ಕಳೆದರು ಅಂತ ಮಕ್ಕಳಿಬ್ಬರ ಜತೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ!

    ಶಿವಮೊಗ್ಗ: ಸಾಲ ಕೇಳಿ ಸ್ನೇಹ ಕಳೆದುಕೊಳ್ಳಬೇಡಿ ಎಂಬ ಮಾತಿದೆ. ಆದರೆ ಇದು ಸಾಲ ಕೊಟ್ಟು ಪ್ರಾಣ ಕಳೆದುಕೊಳ್ಳಬೇಡಿ ಎಂಬಂಥ ಪ್ರಕರಣ. ಏಕೆಂದರೆ ಇಲ್ಲೊಬ್ಬರು ಮಹಿಳೆ ಸಾಲ ಕೊಟ್ಟ ತಪ್ಪಿಗೆ ಮಕ್ಕಳಿಬ್ಬರ ಜತೆ ಆತ್ಮಹತ್ಯೆ ಮಾಡಿಕೊಂಡ ದುರಂತವೊಂದು ನಡೆದಿದೆ.

    ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಯಡೇಹಳ್ಳಿ ಗ್ರಾಮದ ವೀಣಾ ಹಾಗೂ ಆಕೆಯ ಇಬ್ಬರು ಹೆಣ್ಣು ಮಕ್ಕಳು ಸಾವಿಗೀಡಾದವರು. ಭದ್ರಾವತಿ ತಾಲೂಕು ಅರಹತೊಳಲು ಗ್ರಾಮದ ಸಂತೋಷ ಹಾಗೂ ಆಶಾ ದಂಪತಿಗೆ ವೀಣಾ 8 ಲಕ್ಷ ರೂಪಾಯಿ ಸಾಲ ನೀಡಿದ್ದರು.

    ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಸಂತೋಷ್-ಆಶಾ ದಂಪತಿ ವೀಣಾ ಬಗ್ಗೆಯೇ ಅಪಪ್ರಚಾರ ಮಾಡಲಾರಂಭಿಸಿದ್ದರು. ವೀಣಾಗೆ ಬೇರೆಯವರೊಂದಿಗೆ ಅಕ್ರಮ ಸಂಬಂಧವಿದೆ ಎಂದೂ ಈ ದಂಪತಿ ಹೇಳಿದ್ದರು. ಇದರಿಂದ ಮನನೊಂದ ವೀಣಾ ತನ್ನ ಇಬ್ಬರು ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ವೀಣಾ ಮೃತದೇಹ ಹೊನ್ನಾಳಿ ತಾಲೂಕು ಯಕ್ಕನಹಳ್ಳಿ ಬಳಿ ಪತ್ತೆಯಾಗಿದೆ. ಆಕೆಯ ಒಂದು ಪುತ್ರಿಯ ಮೃತದೇಹ ಚನ್ನಗಿರಿ ತಾಲೂಕಿ ನಲ್ಲೂರು ಬಳಿ ಪತ್ತೆಯಾಗಿದೆ. ಇನ್ನೊಂದು ಪುತ್ರಿಗಾಗಿ ಹುಡುಕಾಟ ನಡೆಯುತ್ತಿದೆ.

    ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ; ಕೊಲೆಯಾಗಿ ಹೋದ ತಾಲೂಕು ಪಂಚಾಯತ್ ಉಪಾಧ್ಯಕ್ಷನ ಸಹೋದರ

    12 ವರ್ಷ ತಲೆಮರೆಸಿಕೊಂಡಿದ್ದ ಕಳ್ಳರು ಕೊನೆಗೂ ಸಿಕ್ಕಿಬಿದ್ರು; ಇವರು ಕಳವು ಮಾಡುತ್ತಿದ್ದುದೇ ಆ ಎರಡು ಸಂದರ್ಭಗಳಲ್ಲಿ…

    ಗಾಂಜಾ ಮತ್ತಿನಲ್ಲಿ ಬಡಿದಾಡಿಕೊಂಡ ಕಳ್ಳರು; ಒಬ್ಬ ಕೆಳಕ್ಕೆ ಹಾರಿ, ಮೇಲೆ ಹೋದ..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts