ಹೈದರಾಬಾದ್: ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ಅಧಿಕಾರಕ್ಕೇರಿರುವ ಕಾಂಗ್ರೆಸ್, ತೆಲಂಗಾಣದಲ್ಲಿಯೂ ಇದೇ ತಂತ್ರವನ್ನು ಬಳಸಿ ಆಡಳಿತ ಚುಕ್ಕಾಣಿ ಹಿಡಿದಿದೆ. ಇದೀಗ ಕರ್ನಾಟಕದಂತೆ ತೆಲಂಗಾಣದಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ರಾಜ್ಯಾದ್ಯಂತ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್ ದೊರೆತ್ತಿದ್ದು, ಬಸ್ನಲ್ಲಿ ಪ್ರಯಾಣಿಸಲು ನೂಕುನುಗ್ಗಲು ಉಂಟಾಗುತ್ತಿದೆ.
ಕೆಲವೆಡೆ ಮಹಿಳೆಯರು ಬಸ್ ಹತ್ತುವಾಗ ಡೋರ್, ಕಿಟಕಿಯ ಸರಳುಗಳು ಕಿತ್ತುಕೊಂಡು ಬಂದಿರುವ ಫೋಟೋ ಹಾಗು ವಿಡಿಯೋವನ್ನು ನಾವು ನೋಡಿದ್ದೇವೆ. ಇದೀಗ ಕಳಿತುಕೊಳ್ಳುವ ವಿಚಾರವಾಗಿ ಮಹಿಳೆಯರಿಬ್ಬರ ನಡುವೆ ಹೊಡೆದಾಟವಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯೂ ತೆಲಂಗಾಣದ ನಿರ್ಮಲ್ ಜಿಲ್ಲೆಯ ಮುಧೋಳೆಯಲ್ಲಿ ನಡೆದಿದೆ.
ಇದನ್ನೂ ಓದಿ: ಕೃಷಿಕನಾಗುವುದು ತಪ್ಪಲ್ಲ, ಕೃಷಿಕ ಎಂದೇಳಲು ನಾಚಿಕೆ ಏಕೆ?: ಹೈಕೋರ್ಟ್
ವೈರಲ್ ಆಗಿರುವ ವಿಡಿಯೋದಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ನಡುವೆ ಮೊದಲಿಗೆ ಮಾತಿನ ಚಕಮಕಿ ಆರಂಭವಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಇಬ್ಬರು ಪರಸ್ಪರ ಹೊಡೆದಾಡಿಕೊಳ್ಳಲು ಶುರು ಮಾಡುತ್ತಾರೆ. ಇಬ್ಬರ ನಡುವಿನ ಜಗಳವನ್ನು ಬಿಡಿಸಲು ಕಂಡಕ್ಟರ್ ಹಾಗೂ ಸಹ ಪ್ರಯಾಣಿಕರು ಯತ್ನನಿತ್ನಿಸಿದರಾದ್ದರೂ ಯಾವುದೇ ಪ್ರಯೋಜನವಾಗುವುದಿಲ್ಲ.
ಇನ್ನು ಘಟನೆಯ ವಿಡಿಯೋ ವೈರಲ್ ಆಗಿದ್ದು, ನಿಜವಾದ ನಾರಿ ಶಕ್ತಿ ಅನಾವರಣ ಆಯಿತು ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ಧಾರೆ. ಸೋನಿಯಾ ಗಾಂಧಿ ಜನುಮದಿನದ ನಿಮಿತ್ತ ತೆಲಂಗಾಣ ಕಾಂಗ್ರೆಸ್ ಸರ್ಕಾರವು ಮಹಿಳೆಯರ ಉಚಿತ ಬಸ್ ಸೇವೆ ಒದಗಿಸುವ ಮಹಾಲಕ್ಷ್ಮೀ ಯೋಜೆನೆಗೆ ಚಾಲನೆ ನೀಡಿದ್ದರು.