ಬೆಂಗಳೂರು: ಮಳೆಯಿಂದಾಗಿ ನೀರು ತುಂಬಿಕೊಂಡಿದ್ದ ಅಂಡರ್ಪಾಸ್ನಲ್ಲಿ ಕಾರು ಸಿಕ್ಕಿಕೊಂಡು ತೊಂದರೆಗೀಡಾಗಿ ಅಸ್ವಸ್ಥಗೊಂಡಿದ್ದವರೊಬ್ಬರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ವೈದ್ಯರು ಮತ್ತು ಸಿಬ್ಬಂದಿ ಹಿಂದೇಟು ಹಾಕಿದ್ದರಿಂದ ಅವರು ಆಸ್ಪತ್ರೆಯಲ್ಲೇ ಅನ್ಯಾಯವಾಗಿ ಸಾವಿಗೀಡಾಗಿದ್ದಾರೆ. ಸಾವಿಗೀಡಾದ ಮಹಿಳೆ ಇನ್ಫೊಸಿಸ್ ಉದ್ಯೋಗಿ, ಹೈದರಾಬಾದ್ ಮೂಲದ ಭಾನುರೇಖಾ (22) ಎಂದು ತಿಳಿದುಬಂದಿದೆ.
ಬೆಂಗಳೂರು ಪ್ರವಾಸಕ್ಕೆಂದು ಆಂಧ್ರಪ್ರದೇಶದಿಂದ ಕ್ಯಾಬ್ನಲ್ಲಿ ಕುಟುಂಬವೊಂದು ಬಂದಿದ್ದು, ಅವರಿದ್ದ ವಾಹನ ಕೆ.ಆರ್.ಸರ್ಕಲ್ ಬಳಿಯ ಅಂಡರ್ಪಾಸ್ನಲ್ಲಿ ಸಿಲುಕಿತ್ತು. ಆಗ ಕ್ಯಾಬ್ನಲ್ಲಿದ್ದವರು ನೀರಿನಲ್ಲಿ ಮುಳುಗುವ ಭೀತಿಯಿಂದ ಜೋರಾಗಿ ಕಿರುಚಿದ್ದಾರೆ. ಆಗ ಸಾರ್ವಜನಿಕರು ಹಾಗೂ ತಕ್ಷಣಕ್ಕೆ ಧಾವಿಸಿದ್ದ ಅಗ್ನಿಶಾಮಕ ಸಿಬ್ಬಂದಿಯವರು ಒಬ್ಬೊಬ್ಬರನ್ನೇ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ.
ಇದನ್ನೂ ಓದಿ: ಹವಾಮಾನ ಮುನ್ಸೂಚನೆ: ರಾಜ್ಯಕ್ಕೆ ಮುಂಗಾರು ಪ್ರವೇಶ ಯಾವಾಗ?
ಆ ಪೈಕಿ ಅಸ್ವಸ್ಥರಾಗಿದ್ದ ಒಬ್ಬರನ್ನು ಆಟೋದಲ್ಲಿ ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಕರೆತಂದರೂ ಅಲ್ಲಿದ್ದ ಸಿಬ್ಬಂದಿ ಮತ್ತು ವೈದ್ಯರು ದಾಖಲಿಸಿಕೊಂಡು ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು. ಬಳಿಕ ರೊಚ್ಚಿಗೆದ್ದ ಸಾರ್ವಜನಿಕರೇ ಮಹಿಳೆಯನ್ನು ಸ್ಟ್ರೆಚರ್ನಲ್ಲಿ ಮಲಗಿಸಿಕೊಂಡು ಒಳಕ್ಕೆ ಕರೆದೊಯ್ದು ಆಗ್ರಹಪೂರ್ವಕವಾಗಿ ಪರೀಕ್ಷೆ ಮಾಡಿಸಿದ್ದಾರೆ. ಅಷ್ಟರಲ್ಲಾಗಲೇ ಆಕೆ ಸಾವಿಗೀಡಾಗಿದ್ದಾಳೆಂದು ಪಲ್ಸ್ ನೋಡಿದ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸುಮಾರು ಒಂದು ಗಂಟೆ ಕಾಲ ಆಸ್ಪತ್ರೆ ಮುಂದೆ ಗೋಗರೆದರೂ ಚಿಕಿತ್ಸೆ ನೀಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಆಸ್ಪತ್ರೆಗೆ ಪೊಲೀಸರು ಆಗಮಿಸಿದ್ದಾರೆ.
ಅಂದು ‘ತಪ್ಪಾಯ್ತು ಕ್ಷಮಿಸಿ’ ಎಂದು ಕೈಮುಗಿದು ಕೇಳಿ ಇಂದು ಮತ್ತದೇ ತಪ್ಪು ಮಾಡಿದ ಜಮೀರ್ ಅಹಮದ್!