More

    ಮಹಿಳೆಯರ ಸಾಧನೆ ಶ್ಲಾಘನೀಯ

    ಚಿಕ್ಕಮಗಳೂರು: ಆಧುನಿಕ ಕಾಲದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಅಭೂತಪೂರ್ವ ಸಾಧನೆ ಮಾಡುವ ಮೂಲಕ ಒಂದು ಹೆಜ್ಜೆ ಮುಂದಿದ್ದಾಳೆ ಎಂದು ಬನಶಂಕರಿ ಮಹಿಳಾ ಸಂಘದ ಅಧ್ಯಕ್ಷೆ ಸುವರ್ಣಾ ಕೇಶವಮೂರ್ತಿ ಹೇಳಿದರು.
    ಸಂಘದ ಆವರಣದಲ್ಲಿ ಆಯೋಜಿಸಿದ್ದ ಆಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಕಾನೂನು ಮಹಿಳೆಯರಿಗೆ ವಿಶಿಷ್ಟ ಗೌರವ, ಸ್ಥಾನಮಾನ ಮತ್ತು ಸಮಾನಹಕ್ಕನ್ನು ನೀಡಿದೆ. ಮಹಿಳೆಯರು ಇಂದು ತಂತ್ರಜ್ಞಾನದ ಬೆಳವಣಿಗೆ ಹಾಗೂ ಇತರ ಯಾವುದೇ ಕ್ಷೇತ್ರದಲ್ಲಾದರೂ ಕಾರ್ಯ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು.
    ಮಹಿಳೆ ಪುರುಷರಿಗಿಂತ ಹೆಚ್ಚು ಶಕ್ತಿವಂತಳು. ಇಡೀ ಕುಟುಂಬವನ್ನು ಸರಿ ದಾರಿಗೆ ತರುವ ಸಾಮರ್ಥ್ಯ ಮತ್ತು ಹೊಣೆಗಾರಿಕೆ ಹೊಂದಿದ್ದಾಳೆ. ಇಂತಹ ಮಹಿಳೆಯನ್ನು ನಾವೆಲ್ಲರೂ ಸದಾ ಗೌರವಿಸಬೇಕು ಎಂದರು.
    ಬನಶಂಕರಿ ಮಹಿಳಾ ಸಂಘದ ಉಪಾಧ್ಯಕ್ಷೆ ರಾಧಾ ರಾಜ್‌ಕುಮಾರ್, ಕಾರ್ಯದರ್ಶಿ ಧನಲಕ್ಷ್ಮೀ ಗೋಕುಲ್, ಖಜಾಂಚಿ ಶ್ಯಾಮಲಾರಾಜು, ನಿರ್ದೇಶಕರಾದ ಕಾವೇರಿ ಕಾಂತರಾಜ್, ಗೀತಾ ವೇಣುಗೋಪಾಲ್, ಪವಿತ್ರಾ, ನಿರ್ಮಲಾ, ಭಾಗ್ಯ ಮೋಹನ್, ನಿರ್ಮಲಾ ರವಿಕುಮಾರ್, ಹೇಮಾವತಿ, ಸುಧಾ, ಗೀತಾ, ರುಕ್ಮಿಣಿ, ನಾಗರತ್ನ, ಪದ್ಮಾವತಿ, ಉಮಾ ಪ್ರೇಮಕುಮಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts