ಮಹಿಳೆಯರ ಬಯಲಾಟ ತಂಡ ರಚನೆ

blank

ಕೂಡ್ಲಿಗಿ: ತಾಲೂಕಿನ ವಿರುಪಾಪುರ ಗ್ರಾಮದ ಬಯಲಾಟ ರಂಗ ಕಲಾವಿದೆ ಬಿ. ಗಂಗಮ್ಮ ಅವರಿಗೆ ಬಯಲಾಟ ಅಕಾಡೆಮಿಯಿಂದ 2024-25ನೇ ಸಾಲಿನ ಗೌರವ ಪ್ರಶಸ್ತಿ ಲಭಿಸಿದೆ.

ಕಾಡಪ್ಪ, ಭರಮಕ್ಕ ಅವರ ಪುತ್ರಿಯಾದ 64 ವರ್ಷದ ಗಂಗಮ್ಮ ಅವರು, ತಮ್ಮ 16ನೇ ವಯಸ್ಸಿನಿಂದಲೇ ಬಯಲಾಟಗಳಲ್ಲಿ ಅಭಿನಯಿಸಲು ಆರಂಭಿಸಿದ್ದರು. ಗಂಗಮ್ಮ ಅವರು ಐತಿಹಾಸಿಕ, ಸಾಮಾಜಿಕ, ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ.

ಆದರೆ ಅವರು ಮುಖ್ಯವಾಗಿ ಬಯಲಾಟದ ಪಾತ್ರಗಳಲ್ಲಿ ವಿಜೃಂಭಿಸಿ ರಾಜ್ಯಾದ್ಯಂತ ಹೆಸರು ಮಾಡಿದ್ದಾರೆ. ತಾಲೂಕಿನ ಹಿರಿಯ ರಂಗ ಕಲಾವಿದೆಯರಲ್ಲಿ ಒಬ್ಬರಾಗಿರುವ ಗಂಗಮ್ಮ ಅವರು ಕಿರಿಯರಿಗೆ ಮಾರ್ಗದರ್ಶನ ಮಾಡುವುದರ ಜತೆಗೆ ಮಹಿಳೆಯರದೇ ಬಯಲಾಟ ತಂಡ ಕಟ್ಟಿಕೊಂಡು ರಾಜ್ಯದ ಅನೇಕ ಕಡೆ ಹಾಗೂ ಪಕ್ಕದ ಆಂಧ್ರದಲ್ಲಿಯೂ ಬಯಲಾಟ ಪ್ರದರ್ಶನಗಳನ್ನು ಮಾಡಿದ್ದಾರೆ.

ಹಿಂದುಳಿದ ತಾಲೂಕಿನ ಗ್ರಾಮೀಣ ಪ್ರದೇಶದ ಬಯಲಾಟ ರಂಗ ಕಲಾವಿದೆಯನ್ನು ಗುರುತಿಸಿ ಈ ಸಾಲಿನ ಬಯಲಾಟ ಅಕಾಡೆಮಿ ಪ್ರಶಸ್ತಿ ನೀಡಿರುವುದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿಗೆ ಹೆಮ್ಮೆಯಾಗಿದೆ.
ನನ್ನಂತಹ ಗ್ರಾಮೀಣ ಪ್ರತಿಭೆಯನ್ನು ಗುರುತಿಸಿ ಬಯಲಾಟ ಆಕಾಡೆಮಿ ಪ್ರಶಸ್ತಿ ನೀಡಿರುವುದು ಸಂತೋಷವಾಗಿದ್ದು, ರಂಗಭೂಮಿಗೆ ಸಲ್ಲಿಸಿದ ಸೇವೆಗೆ ಸಂದ ಗೌರವ ಎಂದು ಬಿ. ಗಂಗಮ್ಮ ಪ್ರಕ್ರಿಯಿಸಿದ್ದಾರೆ.

 

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…