ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಹೆಚ್ಚು ಪೊಲೀಸ್ ಸಿಬ್ಬಂದಿ ಕೋವಿಡ್ಗೆ ಒಳಗಾಗುತ್ತಿರುವುದರಿಂದ ಠಾಣೆಗಳಲ್ಲಿ ಅಗತ್ಯವಿರುವ ಸಿಬ್ಬಂದಿಯನ್ನಷ್ಟೇ ನಿಯೋಜಿಸಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಜತೆಗೆ, 50ಕ್ಕೂ ಹೆಚ್ಚು ವಯಸ್ಸಾದ ಸಿಬ್ಬಂದಿಯನ್ನು ಮನೆಯಿಂದಲೇ ಕೆಲಸ ಮಾಡಲು ಸೂಚನೆ ನೀಡಬೇಕು. ಕಾನ್ಸ್ಟೆಬಲ್ಗಳನ್ನು ಪಾಳಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ; ಲಾಕ್ಡೌನ್ನಿಂದ ಕೈಗಾರಿಕೆಗಳಿಗೆ ವಿನಾಯ್ತಿ ನೀಡಿ; ಇಲ್ಲದಿದ್ದರೆ ಮತ್ತೆ ಸಂಕಷ್ಟ; ಸಿಎಂಗೆ ಮನವಿ
ಕೋವಿಡ್ ಕಾಯಿಲೆ ಬಂದ ಪೊಲೀಸರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಅನುವಾಗುವಂತೆ ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಹಣ ಬಿಡುಗಡೆ ಮಾಡಬೇಕು. ಸಾರ್ವಜನಿಕ ಸ್ಥಳಗಳು, ಕೋವಿಡ್ ಆಸ್ಪತ್ರೆ, ಸ್ಮಶಾನ ಮೊದಲಾದ ಸೋಂಕಿನ ಅಪಾಯವಿರುವ ಸ್ಥಳಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪಿಪಿಇ ಕಿಟ್ ನೀಡಬೇಕು ಎಂದು ಹೇಳಿದ್ದಾರೆ.
ಠಾಣೆಗಳಲ್ಲಿ ಗಾಜಿನ ಕ್ಯಾಬಿನ್ ಅಳವಡಿಸಿ ದೂರು ಸ್ವೀಕರಿಸಲು ಕ್ರಮಕೈಗೊಳ್ಳಬೇಕು. ಸಿಬ್ಬಂದಿಗೆ ಆಯುಷ್ ಹಾಗೂ ಇತರ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ನೀಡಬೇಕೆಂದು ಹೇಳಿದ್ದಾರೆ.
ಸೋಮವಾರದಿಂದ ದೇಶದ 12 ಕಡೆಗಳಲ್ಲಿ ಕೋವಿಡ್ ರೋಗಿಗಳಿಗೆ ದೇಶೀಯ ಕರೊನಾ ಲಸಿಕೆ ಪ್ರಯೋಗ