More

    ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

    ಬೆಳಗಾವಿ: ನಿಪ್ಪಾಣಿ ನಗರಸಭೆ ವ್ಯಾಪ್ತಿಯ ನೀರು ಸರಬರಾಜು, ನಗರೋತ್ಥಾನ ಕಾಮಗಾರಿಗಳನ್ನು ಜನವರಿ 15ರೊಳಗೆ ಪೂರ್ಣಗೊಳಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಇಲ್ಲಿನ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನಿಪ್ಪಾಣಿ ನಗರ ಸಭೆ ನೀರು ಸರಬರಾಜು ಮತ್ತು ನಗರೋತ್ಥಾನ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ನಿಪ್ಪಾಣಿ ನಗರಸಭೆ ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ತಿಳಿಸಿದರು. ಸಾರ್ವಜನಿಕ ದೂರುಗಳು ಹೆಚ್ಚಾಗಿವೆ. ಆದ್ದರಿಂದ ನಗರದಲ್ಲಿ ಬಾಕಿ ನೀರು ಸರಬರಾಜು, ನಗರೋತ್ಥಾನ ಕಾಮಗಾರಿಗಳನ್ನು ಶೀಘ್ರ ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು. ಎಲ್ಲ ಕಾಮಗಾರಿಗಳು ಈಗ ಕೊನೆಯ ಹಂತಕ್ಕೆ ಬಂದಿವೆ. ಬಾಕಿ ಕಾಮಗಾರಿಗೆ ಸಮಯ ನಿಗದಿ ಮಾಡಬೇಕು ಎಂದು ತಿಳಿಸಿದರು.

    ಡಿಸಿ ಎಂ.ಜಿ.ಹಿರೇಮಠ ಮಾತನಾಡಿ, ಜನರಿಗೆ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಿ. ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ಕಾರ್ಮಿಕರನ್ನು ತೆಗೆದುಕೊಂಡು ಕಾಮಗಾರಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿದರು. ನಗರಸಭೆ ಅಧ್ಯಕ್ಷ ಜಯವಂತ ಬಾಟ್ಲೆ, ಉಪಾಧ್ಯಕ್ಷೆ ನೀತಾ ಬಾಗಡೆ, ಪೌರಾಯುಕ್ತ ಮಹಾವೀರ ಬೋರಣ್ಣವರ ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಇಂಜಿನಿಯರ್‌ಗಳು ಸಭೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts