ಭೂರಕ್ಷಣೆಯೇ ಪ್ರಥಮ ಆದ್ಯತೆಯಾಗಲಿ

ಸಂಡೂರು ತಾಲೂಕಿನ ಸ್ವಾಮಿಹಳ್ಳಿಯ ನರೇಗಾ ಕಾಮಗಾರಿ ಸ್ಥಳದಲ್ಲಿ ವಿಶ್ವ ಭೂಮಿ ದಿನಾಚರಣೆ ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷೆ ಪಾರ್ವತಮ್ಮ ಕುಮಾರಸ್ವಾಮಿ, ಪ್ರಭಾರ ಪಿಡಿಒ ಪಾಪಣ್ಣ, ತಾಲೂಕು ವಸತಿ ಯೋಜನೆಯ ನೋಡಲ್ ಅಧಿಕಾರಿ ಬಿ.ಪ್ರಕಾಶ್ ಐಹೊಳೆ, ಬಿಎಫ್‌ಟಿ ಯರ‌್ರಿಸ್ವಾಮಿ, ಕೂಲಿಕಾರರು ಇದ್ದರು.

ಸಂಡೂರು: ಅಭಿವೃದ್ಧಿಗೆ ಸಂಬಂಧಿಸಿದ ಸ್ಪರ್ಧೆಯಲ್ಲಿ ಎಲ್ಲ ದೇಶಗಳು ಜಾಗತಿಕ ತಾಪಮಾನದ ಪರಿಣಾಮ ಎದುರಿಸುತ್ತಿವೆ ಎಂದು ಗೊಲ್ಲಲಿಂಗಮ್ಮನಹಳ್ಳಿ ಪಿಡಿಒ ಪಾಪಣ್ಣ ಹೇಳಿದರು.
ಸ್ವಾಮಿಹಳ್ಳಿಯ ನರೇಗಾ ಕಾಮಗಾರಿ ಸ್ಥಳದಲ್ಲಿ ರೀಚ್ ಸಂಸ್ಥೆ, ಗೊಲ್ಲಲಿಂಗಮ್ಮನಹಳ್ಳಿ ಹಾಗೂ ಯರೇನಹಳ್ಳಿ ಗ್ರಾಪಂ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ವಿಶ್ವ ಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ನೈಸರ್ಗಿಕ ಸಂಪನ್ಮೂಲಗಳ ಅತಿಯಾದ ಬಳಕೆಯಿಂದ ಭೂಮಿ ಒಡಲು ಬರಿದಾಗುತ್ತಿದೆ ಎಂದರು.

blank

ಜೀವಸಂಕುಲಕ್ಕೆ ಅಗತ್ಯವಾಗಿರುವ ನೈಸರ್ಗಿಕ ಸಂಪನ್ಮೂಲಗಳು ವ್ಯಾಪಾರದ ಸರಕಾಗಿದ್ದು, ಇದರ ಪರಿಣಾಮ ಪರಿಸರ ಮಾಲಿನ್ಯ ದೊಡ್ಡ ಸಮಸ್ಯೆಯಾಗಿದೆ. ಅರಣ್ಯ ನಾಶದಿಂದ ಮಳೆ ಕೊರತೆ ಉಂಟಾಗಿ ಭೂಮಿಯಲ್ಲಿ ಜೀವರಾಶಿಗಳಿಗೆ ನೀರಿನ ಅಭಾವ ತಲೆದೂರುತ್ತಿದೆ. ತಾಪಮಾನ ಏರಿಕೆಯಾಗಿ ಪರಿಸರ ವ್ಯವಸ್ಥೆಯಲ್ಲಿ ಬದಲಾವಣೆಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಪರಿಸರ ಸಂರಕ್ಷಣೆ ಮಾಡುವುದು ಇಂದಿನ ತುರ್ತು ಅಗತ್ಯವಾಗಿದೆ. ರೈತರು ಹೊಲದ ಬದುಗಳಲ್ಲಿ, ಗ್ರಾಮದ ಕೆರೆ-ಕುಂಟೆಗಳ ಜಾಗದಲ್ಲಿ ಗಿಡಗಳನ್ನು ಬೆಳೆಸುವ ಮೂಲಕ ಭೂಮಿಯನ್ನು ಹಸಿರಾಗಿಸಬೇಕಿದೆ ಎಂದರು.

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank