More

    ದತ್ತಪೀಠದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಆರಂಭ

    ಚಿಕ್ಕಮಗಳೂರು: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಶನಿವಾರ ಬೆಳ್ಳಂಬೆಳಗ್ಗೆ ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗೆ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ತಮ್ಮ ಚುನಾವಣಾ ಪ್ರಚಾರ ಆರಂಭಿಸಿದರು.

    ಬಿಜೆಪಿ ನಾಯಕರೊಂದಿಗೆ ದತ್ತಪೀಠಕ್ಕೆ ತೆರಳಿ ಪೂಜೆ ಸಲ್ಲಿಸಿ ಕೆಲಕಾಲ ಅಲ್ಲಿಯೇ ಕುಳಿತು ಧ್ಯಾನಿಸಿದರು. ಇದಕ್ಕೂ ಮುನ್ನ ಚಿಕ್ಕಮಗಳೂರು ನಗರದಲ್ಲಿ ಮುಂಜಾನೆಯೇ ಓಡಾಟ ನಡೆಸಿ ತಳ್ಳುಗಾಡಿಯಲ್ಲಿ ಬನ್ಸ್ ತಿಂದು ಸರಳತೆ ಮೆರೆದರು. ಇದಾದ ನಂತರ ಬಿಜೆಪಿ ಕಚೇರಿಗೆ ತೆರಳಿ, ಸಾಲು ಸಾಲು ಸಭೆಗಳನ್ನು ನಡೆಸುವ ಮೂಲಕ ಬಿಜೆಪಿ ಬಂಡಾಯ ಶಮನಕ್ಕೆ ಮುಂದಾದರು. ಸಂಜೆ ವೇಳೆಗೆ ತರೀಕೆರೆಗೆ ತೆರಳಿ ಕಾರ್ಯಕರ್ತರ ಸಭೆ ನಡೆಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts