ಬೀದರ್: ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ 602ನೇ ಜಯಂತಿ ಪ್ರಯುಕ್ತ ಇಲ್ಲಿಯ ಮನ್ನಳ್ಳಿ ರಸ್ತೆಯಲ್ಲಿ ಇರುವ ಹೇಮರೆಡ್ಡಿ ಮಲ್ಲಮ್ಮ ಮಂದಿರದಲ್ಲಿ ಏಪ್ರಿಲ್ 28 ರಂದು ಬೆಳಿಗ್ಗೆ 9.30ಕ್ಕೆ ಪೂರ್ವಭಾವಿ ಸಿದ್ಧತಾ ಸಭೆ ಕರೆಯಲಾಗಿದೆ.
ಸಮಾಜ ಬಾಂಧವರು ಸಭೆಯಲ್ಲಿ ಪಾಲ್ಗೊಂಡು ಅರ್ಥಪೂರ್ಣ ಜಯಂತಿ ಆಚರಣೆಗೆ ತಮ್ಮ ಸಲಹೆ ನೀಡಬೇಕು ಎಂದು ಜಿಲ್ಲಾ ರೆಡ್ಡಿ ಸಮಾಜದ ಅಧ್ಯಕ್ಷ ಶಂಕರ ರೆಡ್ಡಿ ಚಿಟ್ಟಾ ಮನವಿ ಮಾಡಿದ್ದಾರೆ.