More

    ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ

    ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಠಾಣ, ನಿಜಾಂಪುರ, ಕೊಳಾರ(ಕೆ), ಗೋರನಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಜೆಡಿಎಸ್ ಮುಖಂಡರು ಪಕ್ಷ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾದರು.
    ಕಲಬುರಗಿ-ಬೀದರ್-ಯಾದಗಿರಿ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು.
    ಜೆಡಿಎಸ್ ಜಿಲ್ಲಾ ಯುವ ಘಟಕದ ಸಂಘಟನಾ ಕಾರ್ಯದರ್ಶಿ ಗಣಪತಿ ಕಮಠಾಣ, ಎಂ.ಡಿ. ಜಾವೀದ್ ಎಂ.ಡಿ. ವಸೀಮ್, ಧನರಾಜ, ನಾಗೇಶ, ಶರಣಪ್ಪ, ಮಹೇಶ, ಸೋಮನಾಥ, ಸನ್ನಿ ಕೋಟೆ, ಅಶೋಕ ಶಾದ್ರಕ್ ಕಾಂಗ್ರೆಸ್‍ಗೆ ಸೇರ್ಪಡೆಗೊಂಡವರಲ್ಲಿ ಸೇರಿದ್ದಾರೆ.
    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಭೀಮಣ್ಣ ಕೊಳ್ಳೆ, ವಿಜಯಕುಮಾರ ಕಾಶೆಂಪುರ, ನಗರಸಭೆ ಸದಸ್ಯ ಹಣಮಂತ ಮಲ್ಕಾಪುರ, ಕಾಂಗ್ರೆಸ್ ಎಸ್.ಟಿ. ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ರಾಕೇಶ ಕುರುಬಖೇಳಗಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts