ಬೆಂಗಳೂರು ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಮೇ 14ರಿಂದ 16ರವರೆಗೆ ನಡೆಸಲು ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಈ ಹಿಂದೆ ಲಿಖಿತ ಪರೀಕ್ಷೆಯನ್ನು ಏ.15ರಿಂದ 17ರವರೆಗೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಈ ಅವಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಮೌಲ್ಯಮಾಪನ ನಡೆಯುವುದರಿಂದ ಹಾಗೂ ಶಿಕ್ಷಕರನ್ನು ಲೋಕಸಭಾ ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿರುವುದರಿಂದ ಆಡಳಿತಾತ್ಮಕ ಹಿತದಷ್ಟಿಯಿಂದ ಪರಿಷ್ಕೃತ ವೇಳಾಪಟ್ಟಿಯನ್ನು ನಿಗದಿಪಡಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಶ್ನೆ ಪತ್ರಿಕೆಯನ್ನು ರೂಪಿಸಿ ರವಾನಿಸಲಿದೆ. ಮೇ 28ರಂದು ಪರೀಕ್ಷೆಯ ಲಿತಾಂಶ ಪ್ರಕಟವಾಗಲಿದೆ. ಎಲ್ಲ ಪ್ರಕ್ರಿಯೆ ಮುಗಿದ ಬಳಿಕ ವರ್ಗಾವಣಾ ವೇಳಾಪಟ್ಟಿಯಂತೆ ಕೌನ್ಸೆಲಿಂಗ್ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆಯು ತಿಳಿಸಿದೆ.