More

    VIDEO| ರಥೋತ್ಸವದ ವೇಳೆ ಮುರಿದು ಬಿದ್ದ ರಥ..!

    ಯಾದಗಿರಿ: ರಥೋತ್ಸವದ ವೇಳೆ ರಥದ ಮೇಲುತುದಿ ಮುರಿದುಬಿದ್ದ ಘಟನೆ ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದಲ್ಲಿ ನಡೆದಿದೆ. ಇದೇ ವೇಳೆ ರಥದ ಚಕ್ರಕ್ಕೆ ವ್ಯಕ್ತಿಯೊಬ್ಬನ ಕಾಲು ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಬಳಿಚಕ್ರ ಗ್ರಾಮದಲ್ಲಿ ಶನಿವಾರ ಮಲ್ಲಯ್ಯ ದೇವರ ರಥೋತ್ಸವ ನಡೆಯಿತು. ಈ ವೇಳೆ ರಥ ಮೇಲ್ಭಾಗ ಮುರಿದು ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗದೇ​ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

    ಘಟನೆಯಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್ ನಿಯಮ ಉಲ್ಲಂಘನೆ ಮಾಡಿ ಗ್ರಾಮಸ್ಥರು ಜಾತ್ರೆ ನಡೆಸಿರುವ ಆರೋಪ ಕೇಳಿಬಂದಿದೆ.

    ಸಾವಿರಾರು ಜನರು ಮಲ್ಲಯ್ಯನ ಜಾತ್ರೆ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಗಾಳಿಗೆ ತೂರಿ ಉತ್ಸವ ಆಚರಣೆ ಮಾಡಲಾಗಿದೆ. ಅವಗಢದ ವೇಳೆ ವ್ಯಕ್ತಿಯೋರ್ವನ ಕಾಲು ಚಕ್ರದಡಿಗೆ ಸಿಲುಕಿ ನರಳಾಟ ಅನುಭವಿಸಿದ್ದಾನೆ. (ದಿಗ್ವಿಜಯ ನ್ಯೂಸ್​)

    ವಾರದಲ್ಲಿ ಶೇ.58 ಸೋಂಕು ಹೆಚ್ಚಳ; ಏ.11ಕ್ಕೆ ಶೇ.7.72 ಇದ್ದ ಸೋಂಕು ದರ ಇದೀಗ ಶೇ.12.20ಕ್ಕೆ ಏರಿಕೆ

    3 ವರ್ಷದಲ್ಲಿ 18 ಬಾಡಿಗೆ ಮನೆ ಬದಲಾವಣೆ: ಪತ್ನಿಯ ವಿಚಿತ್ರ ವರ್ತನೆಗೆ ಬೇಸತ್ತ ಗಂಡ ಮಾಡಿದ್ದೇನು?

    ಜೀವನದಲ್ಲಿ ಯಶಸ್ವಿಯಾಗಲು ನಾಲ್ಕು ಸರಳ ಸೂತ್ರಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts