blank

ಮೊದಲ ದಿನದ ಪ್ರಚಾರದಲ್ಲಿ ರಸ್ತೆ ಬದಿ ಚಾಯ್​ ಪೆ ಚರ್ಚಾ ನಡೆಸಿದ ಯದುವೀರ್​!

Mysore Kodagu

ಮೈಸೂರು: ಬುಧವಾರ ಪ್ರಕಟವಾದ 72 ಅಭ್ಯರ್ಥಿಗಳ ಬಿಜೆಪಿ ಎರಡನೇ ಪಟ್ಟಿಯಲ್ಲಿ ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಹಾಲಿ ಸಂಸದ ಪ್ರತಾಪ್​ ಸಿಂಹಗೆ ಕೊಕ್​ ನೀಡಿ ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್​ಗೆ ಬಿಜೆಪಿ ಮಣೆ ಹಾಕಿದ್ದು, ಮೊದಲ ದಿನವೇ ಭರ್ಜರಿ ಪ್ರಚಾರ ನಡೆಸಿದ್ದಾರೆ.

blank

ಟಿಕೆಟ್​ ಘೋಷಣೆಯಾಗುತ್ತಿದ್ದಂತೆ ಗುರುವಾರ ಸಾರ್ವಜನಿಕವಾಗಿ ಪ್ರಥಮ ಬಾರಿಗೆ ಕಾಣಿಸಿಕೊಂಡ ಯದುವೀರ್​ ಪಕ್ಷದ ನಾಯಕರು ಹಾಗೂ ಮುಖಂಡರೊಂದಿಗೆ ರಸ್ತೆ ಬದಿ ಚಹಾ ಸೇವಿಸಿ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಬಳಿಕ ಬಿಜೆಪಿ ಕಚೇರಿಗೆ ಮತ್ತು ಪಕ್ಷದ ನಾಯಕರ ಮನೆಗೆ ಭೇಟಿ ನೀಡಿದರು. ಈ ವೇಳೆ ಸ್ಥಳೀಯರು ಅವರಿಗೆ ಆರತಿ ಬೆಳಗಿ ಸ್ವಾಗತಿಸಿದರು.

Mysore Kodagu

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ದಾಖಲು; ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಗಣ್ಯರು

ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಕುತುಹಲ ಕೆರಳಿಸಿದ್ದ ಮೈಸೂರು- ಕೊಡಗು ಲೊಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ಕೊನೆಗೂ ಹೊರಬಿದ್ದಿದ್ದು, ನಿರೀಕ್ಷೆಯಂತೆ ರಾಜವಂಶಸ್ಥ ಯದುವೀರ್‌ ಒಡೆಯರ್‌ಗೆ ಟಿಕೆಟ್‌ ನೀಡಲಾಗಿದೆ. ಈ ಮೂಲಕ ಎರಡು ಬಾರಿ ಗೆದ್ದಿರುವ ಹಾಲಿ ಸಂಸದ ಪ್ರತಾಪ್‌ ಸಿಂಹ ಅವರ ಬದಲು ಈ ಬಾರಿ ರಾಜವಂಶಸ್ಥರಿಗೆ ಮಣೆ ಹಾಕಲಾಗಿದೆ. 

ಮೈಸೂರು ಕ್ಷೇತ್ರದಲ್ಲಿ ರಾಜವಂಶಸ್ಥರು ಚುನಾವಣಾ ಅಖಾಡಕ್ಕಿಳಿಯುತ್ತಿರುವುದು ಇದೇ ಮೊದಲಲ್ಲ. ಮೈಸೂರು ಸಾಮಾನ್ಯ ಲೋಕಸಭಾ ಕ್ಷೇತ್ರದಲ್ಲಿ ಈ ಹಿಂದೆ ದಿ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಆಯ್ಕೆಯಾಗಿದ್ದರು. 

Share This Article

ದೇಹದ ತೂಕ ಕಡಿಮೆ ಮಾಡಲು ಮಾವಿನ ಎಲೆ ಕಷಾಯ! Mango Leaves ಬಳಸುವುದು ಹೇಗೆ?

Mango Leaves :  ಇತ್ತೀಚಿನ ದಿನಗಳಲ್ಲಿ, ಅಧಿಕ ತೂಕವು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅಧಿಕ…

ಬೀದಿ ಬದಿ ಅಂಗಡಿಗಳಲ್ಲಿ ಹಣ್ಣಿನ ಜ್ಯೂಸ್​ ಕುಡಿಯುವಾಗ ಐಸ್​ ಸೇರಿಸುವುದನ್ನು ತಪ್ಪಿಸಿ… ಆಘಾತಕಾರಿ ವಿಡಿಯೋ ವೈರಲ್​! Street Juices

Street Juices : ಅನೇಕ ಮಂದಿ ವಿವಿಧ ರೀತಿಯ ಹಣ್ಣಿನ ಜ್ಯೂಸ್‌ಗಳನ್ನು ಇಷ್ಟಪಡುತ್ತಾರೆ. ಅದರಲ್ಲೂ ಬೇಸಿಗೆಯಲ್ಲಿ…

ಆನ್​ಲೈನ್-ಆಫ್​ಲೈನ್ ಸಮತೋಲನ ಅಗತ್ಯ

‘ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾದ ಮಕ್ಕಳ ವಿಷಯದಲ್ಲಿ ಪಾಲಕರೂ ಹೆಚ್ಚು ಜವಾಬ್ದಾರಿ ವಹಿಸಬೇಕು’ ಎನ್ನುತ್ತಾರೆ ನಿಮ್ಹಾನ್ಸ್​ನ ಕ್ಲಿನಿಕಲ್…