ಯಕ್ಷಗಾನಕ್ಕೂ ಯುವಜನರ ಬೆಂಬಲ ಅವಶ್ಯ

yaksha

ವಿಜಯವಾಣಿ ಸುದ್ದಿಜಾಲ ಬೈಂದೂರು

ಯಕ್ಷಗಾನ ಕಲೆಗೆ ಯುವಜನರು ಒಲವು ತೋರಿಸದ ಹಿನ್ನೆಲೆಯಲ್ಲಿ ಯಕ್ಷಗಾನಕ್ಕೆ ಪ್ರೇಕ್ಷಕರ ಒಗ್ಗೂಡಿಸುವಿಕೆ ಕಷ್ಟ. ರಸಮಂಜರಿ ಕಾರ್ಯಕ್ರಮಕ್ಕೆ ಸಿಗುವ ಬೆಂಬಲ ಯಕ್ಷಗಾನಕ್ಕೂ ಸಿಗಬೇಕಿದ್ದು, ವೀಕ್ಷಕರ ಸಂಖ್ಯೆ ಹೆಚ್ಚಬೇಕು ಎಂದು ಉಪ್ಪುಂದ ಗ್ರಾಪಂ ಅಧ್ಯಕ್ಷ ಮೋಹನಚಂದ್ರ ಹೇಳಿದರು.

ಉಪ್ಪುಂದದಲ್ಲಿ ಸೋಮವಾರ ಶ್ರೀ ದುರ್ಗಾಪರಮೇಶ್ವರಿ ಯಕ್ಷಕಲಾ ಟ್ರಸ್ಟ್‌ನ 8ನೇ ವಾರ್ಷಿಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಉದ್ಯಮಿ ಯು.ಎ.ಮಂಜು ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಮದ್ದಳೆಗಾರ ನಾಗೇಶ ಭಂಡಾರಿ ಕರ್ವ, ಹೊಸ್ಕೋಟೆ ಅವರನ್ನು ಸನ್ಮಾನಿಸಲಾಯಿತು. ಪ್ರಮುಖರಾದ ರಾಮ ದೇವಾಡಿಗ, ಸತೀಶ ಶೆಟ್ಟಿ, ದಿನೇಶ ಕುಂದರ್, ಗಿರೀಶ ಶ್ಯಾನುಭಾಗ್, ವಿಷ್ಣು ಆರ್.ಪೈ, ಸುಧಾಕರ ದೇವಾಡಿಗ, ಮಂಜುನಾಥ ದೇವಾಡಿಗ, ಚಂದ್ರಹಾಸ ಗೌಡ, ನಾರಾಯಣ ಬಿಜೂರು ಉಪಸ್ಥಿತರಿದ್ದರು. ಶ್ರೀಧರ ದೇವಾಡಿಗ ಸ್ವಾಗತಿಸಿದರು. ಗಣೇಶ ದೇವಾಡಿಗ ವಂದಿಸಿದರು. ರಾಮಕೃಷ್ಣ ಡಿ. ಕಾರ್ಯಕ್ರಮ ನಿರೂಪಿಸಿದರು. ನಂತರ ಕಂಸವಧೆ ಯಕ್ಷಗಾನ ಪ್ರದರ್ಶನಗೊಂಡಿತು.

ವಾದಿರಾಜರಿಂದ ಸಂಕೀರ್ತನಾ ಪದ್ಯ ರಚನೆ

ಪತ್ರಕರ್ತರಿಂದ ಸಮಾಜಕ್ಕೆ ಜ್ಞಾನದ ಅರಿವು

Share This Article

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…