ರಸ್ತೆ ತಿರುವುಗಳಲ್ಲಿ ಸೂಚನಾ ಫಲಕ ಅಳವಡಿಸಿ, ಪಟ್ಟಣದ ಯುವಕರಿಂದ ಶಾಸಕರಿಗೆ ಮನವಿ

blank

ಯಲಬುರ್ಗಾ: ಪಟ್ಟಣದಿಂದ ಬಂಡಿ ಕ್ರಾಸ್ ಮೂಲಕ ಕುಷ್ಟಗಿಗೆ ತೆರಳುವ ರಸ್ತೆ ಮಾರ್ಗದ ತಿರುವಿನಲ್ಲಿ ಸೂಚನಾ ಫಲಕಗಳಿಲ್ಲದ ಕಾರಣ ಅಪಘಾತಗಳು ಸಂಭವಿಸುತ್ತಿದ್ದು, ಸೂಚನಾ ಫಲಕ ಮತ್ತು ಹಂಪ್ಸ್ ಅಳವಡಿಸುವಂತೆ ಒತ್ತಾಯಿಸಿ ಪಟ್ಟಣದ ಯುವಕರು ಶಾಸಕ ಹಾಲಪ್ಪ ಆಚಾರ್‌ಗೆ ಶುಕ್ರವಾರ ಮನವಿ ಸಲ್ಲಿಸಿದರು.

ಬಂಡಿ ಕ್ರಾಸ್ ಬಳಿ ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಯಲಬುರ್ಗಾದ ಅಜಯ್ ಹುಬ್ಬಳ್ಳಿ ಎಂಬುವರು ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತಾಲೂಕಿನ ಬಹುತೇಕ ಕಡೆಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿವೆ. ರಸ್ತೆ ತಿರುವುಗಳಲ್ಲಿ ಸೂಚನಾ ಫಲಕ, ಹಂಪ್ಸ್ ಇಲ್ಲದ ಕಾರಣ ಅಪಘಾತ ಸಂಭವಿಸುತ್ತಿವೆ. ಅಪಘಾತ ವಲಯಗಳಿದ್ದಲ್ಲಿ ಕಡ್ಡಾಯವಾಗಿ ನಾಮಫಕಲ ಅಳವಡಿಸಬೇಕು. ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿದರು.

ಯುವಕರಾದ ಯಾರ್ಕರ್ ಮಹೇಶ, ಭಾಷಾ ನೀಲಗಾರ್, ಬಸವರಾಜ ತೋಟದ, ಶಂಕರ ಟೆಂಗಿನಕಾಯಿ, ಕಲ್ಲೇಶಪ್ಪ ಕರಮುಡಿ, ಪ್ರಶಾಂತ ಸೀಳಿನ್, ಕಿರಣ್ ಸಿಳ್ಳಿ, ಅಮರೇಶ ಹುಬ್ಬಳ್ಳಿ, ರಮೇಶ ಸ್ಟಾಂಪಿನ್, ಕಲ್ಲೇಶಪ್ಪ ಕರಮುಡಿ, ಅಯ್ಯನಗೌಡ ಕೊಡಗಲಿ, ಸಂಗಮೇಶ ಬಿದರಿ, ರಮೇಶ ಸ್ಟಾಂಪಿನ್ ಇದ್ದರು.

Share This Article

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips

Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…

ಈ 3 ರಾಶಿಯ ಮಹಿಳೆಯರು ಹುಟ್ಟಿನಿಂದಲೇ ಅಪಾರ ಬುದ್ಧಿಶಕ್ತಿ ಹೊಂದಿರುತ್ತಾರಂತೆ! ನಿಮ್ಮದೂ ಇದೇ ರಾಶಿನಾ? Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ…

ಬೇಸಿಗೆ ತಂಪಾಗಿರಲು ಹಾಲು ಹಾಕದ ಮಿಲ್ಕ್ ಶೇಕ್

ಬೇಸಿಗೆಯಲ್ಲೂ ನಮ್ಮನ್ನು ತಂಪಾಗಿಟ್ಟು, ಸಾಮಾನ್ಯವಾಗಿ ಆಗುವ ಸುಸ್ತನ್ನು ಕಡಿಮೆ ಮಾಡುವ ವಿಶೇಷ ಮಿಲ್ಕ್ ಶೇಕ್ ಬಗ್ಗೆ…