ಅನುವುಗಾರರಿಗೆ ಮಾಸಿಕ 10 ಸಾವಿರ ರೂ. ನಿಗದಿಪಡಿಸಿ

blank

ಯಲಬುರ್ಗಾ: ಕೃಷಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನುವುಗಾರರಿಗೆ ಮಾಸಿಕ ಕನಿಷ್ಠ ಹತ್ತು ಸಾವಿರ ರೂ. ಗೌರವಧನ ನಿಗದಿಪಡಿಸುವಂತೆ ಒತ್ತಾಯಿಸಿ ತಾಲೂಕು ರೈತ ಅನುವುಗಾರರ ಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ತಹಸೀಲ್ದಾರ್ ಶ್ರೀಶೈಲ ತಳವಾರ್‌ಗೆ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಕಲ್ಲಪ್ಪ ಕರಿಗೌಡರ್ ಮಾತನಾಡಿ, ರಾಜ್ಯದ ಕೃಷಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನುವುಗಾರರಿಗೆ ಮಾಸಿಕವಾಗಿ ಕನಿಷ್ಠ 10 ಸಾವಿರ ರೂ. ಗೌರವ ಧನ ನಿಗದಿಪಡಿಸಬೇಕು. ರಾಜ್ಯಾದ್ಯಂತ ನಡೆಯುವ ಬೆಳೆ ಸರ್ವೇ, ನಷ್ಟದ ಸರ್ವೇ ಹಾಗೂ ಮಣ್ಣು ಪರೀಕ್ಷೆ ಸೇರಿದಂತೆ ನಾನಾ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ರೈತರ ಕೃಷಿ ಚಟುವಟಿಕೆಗಳಿಗೆ ಸಲಹೆ ಸೂಚನೆ ನೀಡುವುದರ ಜತೆಗೆ ಸರ್ಕಾರ ಮತ್ತು ಇಲಾಖೆಗೆ ನೆರವಾಗಿ ಕೆಲಸ ಮಾಡುತ್ತಿದ್ದಾರೆ. ದಶಕಗಳ ಕಾಲದಿಂದ ನಿರಂತರವಾಗಿ ಕೆಲಸ ಮಾಡುತ್ತಿರುವ ಅನುವುಗಾರರನ್ನು ತೆಗೆದು ಹಾಕುವುದರಿಂದ ವಿವಿಧ ಸರ್ವೇ ಕೆಲಸಕ್ಕೆ ತೊಂದರೆಯಾಗಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ನಿರ್ಧಾರದಿಂದ ಅನೇಕ ಯೋಜನೆಗಳು ಕುಂಠಿತಗೊಂಡಿದ್ದು, ತಕ್ಷಣ ಸರ್ಕಾರ ಮಧ್ಯ ಪ್ರವೇಶಿಸಿ ಅನುವುಗಾರರನ್ನು ಮುಂದುವರಿಸಲು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಪದಾಧಿಕಾರಿಗಳಾದ ಈರಪ್ಪ ಕಮ್ಮಾರ, ಖಲೀಮ್ ಹಿರೇಮನಿ, ಯಮನೂರ ಮುಧೋಳ, ಹುಸೇನಸಾಬ್ ದಮ್ಮೂರು, ಮಹಾಂತೇಶ ಶಾಖಾಪೂರ ಇದ್ದರು.

Share This Article

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…