ಕೂಲಿಕಾರರಿಗೆ ನರೇಗಾದಡಿ ಕೆಲಸ ಕೊಡಿ, ಜಿಪಂ ಯೋಜನಾ ನಿರ್ದೇಶಕ ವಿ.ಪ್ರಕಾಶ ಸೂಚನೆ

Narega works Visit

ಯಲಬುರ್ಗಾ: ತಾಲೂಕಿನ ಮುಧೋಳ, ಕರಮುಡಿ, ಬಂಡಿ ಮತ್ತು ಬಳೂಟಗಿ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಮತ್ತು ನಾನಾ ಯೋಜನೆಗಳಡಿ ನಿರ್ಮಾಣ ಹಂತದಲ್ಲಿರುವ ಕಾಮಗಾರಿ ಸ್ಥಳಕ್ಕೆ ಜಿಪಂ ಯೋಜನಾ ನಿರ್ದೇಶಕ ವಿ.ಪ್ರಕಾಶ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಮಾತನಾಡಿದ ಅವರು, ಮುಧೋಳದಲ್ಲಿ ಮಹಿಳಾ ಸ್ವಸಹಾಯ ಸಂಘದ ಕೋಳಿ ಸಾಕಣೆ ಘಟಕದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಬೇಕು. ತಾಲೂಕಿನ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾದಡಿ ನಾನಾ ಕಾಮಗಾರಿ ಆರಂಭಿಸಿ ಕೂಲಿಕಾರರಿಗೆ ಕೆಲಸ ಕೊಡಬೇಕು ಎಂದು ಸೂಚಿಸಿದರು.

ಮುಧೋಳದಲ್ಲಿ ನಾಲೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿ ಕಾರ್ಮಿಕರಿಂದ ಕೆಲಸದ ಮಾಹಿತಿ ಪಡೆದರು. ಪ್ರತಿದಿನ ಕೂಲಿಕಾರರು ಎಷ್ಟು ಜನ ಬರುತ್ತಾರೆ? ಯಾವ ವಿಧದ ಕೆಲಸ ಕೊಡುತ್ತಿರಿ? ಎಂದು ಕೇಳಿದ ಅವರು, ಕೆಲಸಗಾರರಿಗೆ ಸರಿಯಾದ ಕೂಲಿ ದೊರೆಯುವಂತೆ ಮಾಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಕ್ಕೆ ಬರುವಂತೆ ನೋಡಿಕೊಳ್ಳಬೇಕು ಎಂದರು.

ತಾಪಂ ಇಒ ಸಂತೋಷ ಪಾಟೀಲ್, ಪಶು ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ ಚೂರಿ, ಎನ್‌ಆರ್‌ಎಲ್‌ಎಂ ತಾಲೂಕು ಸಂಯೋಜಕರಾದ ಉದಯಕುಮಾರ, ಜಾಕೀರ್ ಹುಸೇನ್, ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ, ತಾಂತ್ರಿಕ ಸಹಾಯಕ ವಿಜಯಕುಮಾರ, ಬಿಎಫ್‌ಟಿ ಗುರುಬಸಯ್ಯ, ಡಿಇಒ ಮೈಲಾರಿ ಇತರರಿದ್ದರು.

Share This Article

ಈ ನಕ್ಷತ್ರದಲ್ಲಿ ಹುಟ್ಟಿದ ಗಂಡಸರು ತಮ್ಮ ಪತ್ನಿಯರನ್ನು ರಾಜಕುಮಾರಿಯಂತೆ ನೋಡಿಕೊಳ್ಳುತ್ತಾರೆ! Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon

watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು  ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…

ಕುತ್ತಿಗೆ-ತಲೆ ನೋವನ್ನು ನಿರ್ಲಕ್ಷಿಸುತ್ತಿದ್ದೀರಾ?; ಎಚ್ಚರದಿಂದಿರಿ.. ಇದು ಅಪಾಯದ ಮುನ್ಸೂಚನೆ | Health Tips

ಕುತ್ತಿಗೆ ಮತ್ತು ಭುಜದ ಸುತ್ತಲಿನ ಪ್ರದೇಶದಲ್ಲಿನ ನೋವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಏಕೆಂದರೆ ಇದು ಸರ್ವಿಕಲ್…