ಅಂಗವಿಕಲರ ಕಲ್ಯಾಣಕ್ಕೆ ಶೇ.5 ಅನುದಾನ ಮೀಸಲು, ಪಪಂ ಮುಖ್ಯಾಧಿಕಾರಿ ನಾಗೇಶ ಹೇಳಿಕೆ

Workshop for Persons with Disabilities

ಯಲಬುರ್ಗಾ: ಅಂಗವಿಕಲರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸೆಲ್ಕೋ ಫೌಂಡೇಷನ್ ನೆರವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಪಪಂ ಮುಖ್ಯಾಧಿಕಾರಿ ನಾಗೇಶ ಹೇಳಿದರು.

ಪಟ್ಟಣದ ಬುದ್ಧ ಬಸವ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಸೆಲ್ಕೋ ಫೌಂಡೇಷನ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವೀರಭದ್ರೇಶ್ವರ ವಿಕಲಚೇತನರ ಗ್ರಾಮೀಣಾಭಿವೃದ್ಧಿ, ಶಿಕ್ಷಣ ಸಂಸ್ಥೆ ಹಾಗೂ ತಾಪಂ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಂಗವಿಕಲರ ಸೌರ ಸ್ವಉದ್ಯೋಗ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಅಂಗವಿಕಲರ ಸ್ವಉದ್ಯೋಗ ಜತೆಗೆ ಆರ್ಥಿಕ ಸಬಲೀಕರಣಕ್ಕೆ ಅನುಕೂಲವಾಗಲಿದೆ. ಸರ್ಕಾರ ಅಂಗವಿಕಲರ ಕಲ್ಯಾಣಕ್ಕಾಗಿ ಶೇ.5 ಅನುದಾನ ಮೀಸಲಿರಿಸಿದೆ. ವಿವಿಧ ಸಂಘ ಸಂಸ್ಥೆಗಳ ನೆರವು ನೀಡುತ್ತಿವೆ. ಸೆಲ್ಕೋ ಫೌಂಡೇಷನ್ ಅಂಗವಿಕಲರಿಗಾಗಿ ಸೌರ ಸ್ವಉದ್ಯೋಗ ಮೂಲಕ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿರುವುದು ಹೆಮ್ಮೆ ವಿಷಯ ಎಂದರು.

ಸೆಲ್ಕೋ ಸಂಸ್ಥೆ ವ್ಯವಸ್ಥಾಪಕ ಮಂಜುನಾಥ ಭಾಗವತ್ ಮಾತನಾಡಿ, ಜಿಲ್ಲೆಯ ಅಂಗವಿಕಲರ ಕಲ್ಯಾಣಕ್ಕಾಗಿ ಮೂರು ಸಾವಿರಕ್ಕೂ ಅಧಿಕ ಸೌರ ಸ್ವಉದ್ಯೋಗವನ್ನು ಸಂಸ್ಥೆಯಿಂದ ಕಲ್ಪಿಸಲಾಗಿದೆ. ಸಮಾಜದಲ್ಲಿ ಯಾರಿಗೂ ಹೊರೆಯಾಗಬಾರದು ಎಂಬ ಉದ್ದೇಶದಿಂದ ಸ್ವಾವಲಂಬಿ ಬದುಕಿಗೆ ಸಹಕಾರಿಸಲಾಗಿದೆ ಎಂದರು.

ತಾಪಂ ಇಒ ಸಂತೋಷ ಪಾಟೀಲ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ್ ದೇಶಪಾಂಡೆ, ವೀರಭದ್ರೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಈರಪ್ಪ ಕರೆಕುರಿ, ಎನ್‌ಆರ್‌ಎಲ್‌ಎಂ ತಾಲೂಕು ಅಧಿಕಾರಿ ಉದಯಕುಮಾರ, ಪ್ರಮುಖರಾದ ಪ್ರಕಾಶ ಮೇಟಿ, ಚಂದ್ರಶೇಖರ ಮಡಿವಾಳರ್, ಮಂಜುಳಾ ಶಾನೂರಪ್ಪ, ಭೀಮವ್ವ , ಜಯಶ್ರೀ ಗುಳಗಣ್ಣವರ, ಶಂಕ್ರಮ್ಮ ಇತರರಿದ್ದರು.

Share This Article

ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips

Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…

ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd

bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…

ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips

Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…