More

    ಏಕತೆಯ ಪ್ರತಿಬಿಂಬ ಭಾರತ್ ಜೋಡೋ ಅಭಿಯಾನ: ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಾಲತಿ ನಾಯಕ್ ಹೇಳಿಕೆ

    ಯಲಬುರ್ಗಾ: ಭಾರತ್ ಜೋಡೋ ಕಾರ್ಯಕ್ರಮ ಪ್ರೋತ್ಸಾಹಿಸಲು ಕಾರ್ಯಕರ್ತೆಯರಿಂದ ರಂಗೋಲಿ ಹಾಕುವ ಮೂಲಕ ವಿನೂತನವಾಗಿ ಕೈಜೋಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಾಲತಿ ನಾಯಕ್ ಹೇಳಿದರು.

    ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭಾರತ್ ಜೋಡೋ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಭಾರತ್ ಜೋಡೋ ಅಭಿಯಾನ ದೇಶದ ಏಕತೆ ಪ್ರತಿಬಿಂಬಿಸುವುದಾಗಿದೆ. ಇದನ್ನು ಕ್ಷೇತ್ರದ ಮನೆ ಮನೆಗೆ ಮುಟ್ಟಿಸುವಂತಹ ಪ್ರಯತ್ನ ಮಾಡಲಾಗುತ್ತಿದೆ. ಜಿಲ್ಲಾದ್ಯಂತ ಬ್ಲಾಕ್ ಕಾಂಗ್ರೆಸ್ ಕಚೇರಿಗಳಲ್ಲಿ ರಂಗೋಲಿ ಹಾಕುವ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಜಾರಿಯಾದ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ಮನದಟ್ಟು ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ರಂಗೋಲಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತ ಚಿತ್ರ ಸೇರಿದಂತೆ ವಿವಿಧ ಚಿತ್ರಗಳನ್ನು ಬಿಡಿಸಿ ಬಿಜೆಪಿ ಸರ್ಕಾರದ ವೈಫಲ್ಯ ಎತ್ತಿ ತೋರಿಸಲಾಗುವುದು ಎಂದರು.

    ಪಪಂ ಸದಸ್ಯೆ ನಂದಿತಾ ದಾನರಡ್ಡಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಗೊಂಡಬಾಳ, ಕಾರ್ಯದರ್ಶಿಗಳಾದ ವಿಶಾಲಾಕ್ಷಿ ತಾವರಗೇರಾ, ವಿಜಯಲಕ್ಷ್ಮೀ ಗುಳೇದ, ಸಂಘಟನಾ ಕಾರ್ಯದರ್ಶಿ ಸೌಭಾಗ್ಯ ಗೊರವರ, ಪ್ರಮುಖರಾದ ರಶ್ಮಿ ರಾಜಶೇಖರ ಹಿಟ್ನಾಳ, ಗಿರಿಜಾ ರೇವಣಪ್ಪ ಸಂಗಟಿ, ಸಾವಿತ್ರಿ ಗೊಲ್ಲರ, ಫರಿದಾಬೇಗಂ, ಜಯಶ್ರೀ ಅರಕೇರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts