More

    ಬಿಳಿಗಿರಿರಂಗನಬೆಟ್ಟದ ಬಸ್ ತಡೆದ ಸೋಲಿಗರು

    ಯಳಂದೂರು: ತಾಲೂಕಿನ ಪ್ರಸಿದ್ಧ ಗಿರಿಧಾಮವಾಗಿರುವ ಬಿಳಿಗಿರಿರಂಗನಬೆಟ್ಟಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸ್ಥಳೀಯರನ್ನು ಹೊರತುಪಡಿಸಿ ಬೇರೆಯವರನ್ನು ಕರೆತರಬಾರದು ಎಂದು ಸೋಲಿಗರು ಹಾಗೂ ಸ್ಥಳೀಯರು ದೇವಸ್ಥಾನದ ಸಮೀಪ ಸೋಮವಾರ ಬಸ್ ತಡೆದು ಪ್ರತಿಭಟನೆ ನಡೆಸಿದರು.


    ಜಿಲ್ಲೆ ಹಾಗೂ ತಾಲೂಕಿನಲ್ಲಿ ಎಲ್ಲೆಡೆ ಕರೊನಾ ಭೀತಿ ಇದೆ. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಚೆಕ್‌ಪೋಸ್ಟ್‌ನಲ್ಲಿ ಸಾರ್ವಜನಿಕ ವಾಹನಗಳಿಗೆ ನಿಷೇಧ ಹೇರಲಾಗಿದೆ. ಆದರೆ ಬಿಳಿಗಿರಿರಂಗನಬೆಟ್ಟಕ್ಕೆ ಬೆಂಗಳೂರು ಸೇರಿ ದೂರದ ಊರುಗಳಿಂದ ಬಸ್‌ಗಳಲ್ಲಿ ಸಂಚರಿಸುವವರ ಸಂಖ್ಯೆ ಅಧಿಕವಾಗಿದೆ. ಖಾಸಗಿ ವಾಹನಗಳ ನಿಷೇಧದಿಂದ ಹೊರಗಿನವರು ಖಾಸಗಿ ಬಸ್‌ಗಳಲ್ಲಿ ಬರುತ್ತಿದ್ದಾರೆ. ಇದು ಪರಿಸರ ಸೂಕ್ಷ್ಮ ಪ್ರದೇಶವಾಗಿದೆ. ಇದುವರೆಗೂ ಇಲ್ಲಿಗೆ ಕರೊನಾ ಸೋಂಕು ಬಂದಿಲ್ಲ. ಮುಂದಿನ ದಿನಗಳಲ್ಲೂ ಇದನ್ನು ಹೀಗೆ ಉಳಿಸಿಕೊಂಡು ಹೋಗಬೇಕಾದರೆ ಈಗ ಎಚ್ಚರಿಕೆ ವಹಿಸುವುದು ಅಗತ್ಯ. ಹಾಗಾಗಿ ಬಸ್‌ಗಳಲ್ಲಿ ಸ್ಥಳೀಯರಿಗೆ ಮಾತ್ರ ಅವಕಾಶ ನೀಡಬೇಕು.


    ಈ ಹಿಂದೆ ಲಾಕ್‌ಡೌನ್ ಆಗಿದ್ದ ವೇಳೆ ಬೆಟ್ಟಕ್ಕೆ ಸಂಪೂರ್ಣವಾಗಿ ಬಸ್ ನಿಷೇಧ ಮಾಡಲಾಗಿತ್ತು. ಆಗ ಕರೊನಾ ಭೀತಿಯೇ ಇರಲಿಲ್ಲ. ಯಳಂದೂರು ಹಾಗೂ ಚಾಮರಾಜನಗರಗಳಿಗೆ ಇಲ್ಲಿಂದ ಬಸ್‌ಗಳು ಸಂಚರಿಸುತ್ತವೆ. ಪ್ರತಿಯೊಂದು ವ್ಯವಹಾರಕ್ಕೂ ಸ್ಥಳೀಯರು ಇವೆರಡು ಪಟ್ಟಣಗಳಿಗೆ ಸಂಚರಿಸುತ್ತಾರೆ. ಹಾಗಾಗಿ ಸ್ಥಳೀಯರನ್ನು ಮಾತ್ರ ಬಸ್‌ನಲ್ಲಿ ಹತ್ತಿಸಿಕೊಳ್ಳಬೇಕು. ಬೇರೆ ಊರಿನ ಪ್ರಯಾಣಿಕರಿಗೆ ನಿಷೇಧ ಹೇರಬೇಕು ಎಂದು ನಿರ್ವಾಹಕ ಮತ್ತು ಚಾಲಕರಿಗೆ ಎಚ್ಚರಿಸಿದರು.


    ಈ ಬಗ್ಗೆ ಸಂಬಂಧಪಟ್ಟವರಿಗೆ ತಿಳಿಸಲಾಗುವುದು ಎಂದು ನಿರ್ವಾಹಕ ಮತ್ತು ಚಾಲಕರು ತಿಳಿಸಿದರು. ಸೋಲಿಗರು, ಮಹಿಳೆಯರು, ಗ್ರಾಮಸ್ಥರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts