More

    VIDEO| ಉಕ್ಕಿ ಹರಿದ ಯಮುನೆ; ನೆರೆಯಿಂದ ತತ್ತರಿಸಿದ ದೆಹಲಿ

    ನವದೆಹಲಿ: ಕಳೆದ ಕೆಲವು ದಿನಗಳಿಂದ ಉತ್ತರ ಭಾರತದ ಹಲವು ಕಡೆ ಮಳೆರಾಯ ಆರ್ಭಟಿಸುತ್ತಿದ್ದು, ಯಮುನೆಯ ರುದ್ರನರ್ತನಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರಿಸಿ ಹೋಗಿದೆ. ನಗರದ ಬಹುತೇಕ ಭಾಗ ಜಲಾವೃತಗೊಂಡಿದ್ದು, ನೀರು ಸುಪ್ರೀಂ ಕೋರ್ಟ್​ವರೆಗೂ ತಲುಪಿದೆ.

    ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೇನೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF) ಸಹಾಯ ಪಡೆಯುವಂತೆ ಸೂಚಿಸಿದ್ದಾರೆ.

    ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಮಳೆ ಬಿರುಸು; ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

    ದೆಹಲಿಯ ಕೆಲವು ಪ್ರದೇಶದಲ್ಲಿ ನೀರು ಕಡಿಮೆಯಾಗಲು ಶುರುವಾದ ನಂತರ ವಿಕಾಸ್​ ಭವನದ ಬಳಿ ಇರುವ ಡ್ರೈನ್​ ರೆಗ್ಯುಲೇಟರ್​ ಕೆಟ್ಟು ಹೋದ ಕಾರಣ ITO ಹಾಗೂ ರಾಜ್​ಘಾಟ್​ ಪ್ರದೇಶಗಳ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಸುಮಾರು ಘಂಟೆಗಳ ಕಾಲ ಪರದಾಡಿದರು.

    ತೀವ್ರ ಮಳೆಯಿಂದಾಗಿ ನಗರದಲ್ಲಿರುವ ನೀರು ಸಂಸ್ಕರಣಾ ಘಟಕಗಳು ಕೆಟ್ಟು ಹೋಗಿದ್ದು, ಕುಡಿಯುವ ನೀರಿಗೂ ಜನ ಪರದಾಡುವಂತಾಗಿದೆ. ಪ್ರವಾಹದ ನೀರು ತಿಲಕ್​ ಮಾರ್ಗದಲ್ಲಿರುವ ಸುಪ್ರೀಂ ಕೋರ್ಟ್​ವರೆಗೂ ತಲುಪಿದ್ದು ಆದಷ್ಟು ಬೇಗ ಸಮಸ್ಯೆ ಬಗೆಹರಿಸುವಂತೆ ಸಿಎಂ ಅಧಿಕಾರಿಗಳಿದ ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts