ರಾಕಿಂಗ್ ಸ್ಟಾರ್ ಯಶ್ ಜನ್ಮದಿನಕ್ಕೆ ದಿನಗಣನೆ ಆರಂಭವಾಗಿದೆ. ಡಿ. 8ರ ಬರ್ತ್ಡೇ ಪ್ರಯುಕ್ತ ಕೆಜಿಎಫ್ ಚಾಪ್ಟರ್ 2 ಟೀಸರ್ ಸಹ ಬಿಡುಗಡೆ ಆಗಲಿದೆ. ಈ ನಡುವೆಯೇ ತಮಿಳುನಾಡಿನ ತಿರುನಲ್ಲೂರಿಗೆ ಯಶ್ ಭೇಟಿ ನೀಡಿದ್ದಾರೆ. ಕೇವಲ ಅವರಷ್ಟೇ ಅಲ್ಲ, ರಾಜ್ಯದ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ್ ನಾರಾಯಣ್ ಸಹ ಅವರಿಗೆ ಸಾಥ್ ನೀಡಿದ್ದಾರೆ. ಹೌದು, ತಮಿಳುನಾಡಿನ ಕಾರೈಕಲ್ ಜಿಲ್ಲೆಯಲ್ಲಿರುವ ತಿರುನಲ್ಲೂರಿನಲ್ಲಿರುವ ಶನೈಶ್ವರ ದೇವಸ್ಥಾನಕ್ಕೆ ಯಶ್ ಭೇಟಿ ನೀಡಿದ್ದಾರೆ. ಕೆಜಿಎಫ್ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಸಹ ದೇವರ ದರ್ಶನ ಪಡೆದಿದ್ದಾರೆ. ಆ ಭೇಟಿಯ ಒಂದಷ್ಟು ಫೋಟೋಗಳು ಇಲ್ಲಿವೆ.