ಮನಸ್ಸಿನ ಏಕಾಗ್ರತೆಗೆ ಯೋಗ, ಧ್ಯಾನ ಮುಖ್ಯ

blank

ವಿರಾಜಪೇಟೆ : ಭಗವದ್ಗೀತೆಯಲ್ಲಿನ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ಭೂಸೇನೆಯ ನಿವೃತ್ತ ಕ್ಯಾಪ್ಟನ್ ಬಿ. ವಿ. ಭವಾನಿ ಶಂಕರ್ ಬೋರ್ಕಾರ್ ಅಭಿಪ್ರಾಯಪಟ್ಟರು.
ಬೇಟೋಳಿ ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕೊಡಗು ಬಾಲವಲೀಕಾರ್ ರಾಜಾಪುರ ಸಾರಸ್ವತ ಬ್ರಾಹ್ಮಣ ಸಮಾಜದ ಮಕ್ಕಳ ವೈದ್ಧಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಏನನ್ನಾದರೂ ಕಲಿಯುವ ಮೊದಲು ಆತನಲ್ಲಿ ಶ್ರದ್ಧೆ ಹಾಗೂ ಕಲಿಯುವ ಆಸಕ್ತಿ ಇರಬೇಕು. ಇದರೊಂದಿಗೆ ಕಲಿಯುವ ಸಂದರ್ಭ ದಲ್ಲಿ ಏಕಾಗ್ರತೆ ಮುಖ್ಯವಾಗಿದ್ದು ಗುರುಗಳು ಬೋಧಿಸಿದ್ದನ್ನು ಉತ್ತಮ ರೀತಿಯಲ್ಲಿ ಕೇಳಿಕೊಳ್ಳಬೇಕು. ಶ್ರವಣ ಮಾಡಿಕೊಂಡದ್ದನ್ನು ಮನದಲ್ಲಿ ಮೇಲಿಂದ ಮೇಲೆ ಮನನ ಮಾಡಿಕೊಳ್ಳಬೇಕು. ಮನನ ಮಾಡಿಕೊಂಡ ನಂತರ ಅದನ್ನು ಅನುಷ್ಠಾನಗೊಳಿಸಬೇಕು. ಈ ರೀತಿ ಕಲಿತಂತಹ ಸಂದರ್ಭದಲ್ಲಿ ಮಾತ್ರ ಕಲಿತಂತಹ ವಿಚಾರವೂ ನಮ್ಮಲ್ಲಿ ಉಳಿಯುತ್ತದೆ. ಕಲಿಕೆಯ ಮೊದಲ ಹಂತವೇ ಏಕಾಗ್ರತೆ ಎಂದು ತಿಳಿಸಿದರು.
ಮನಸ್ಸು ಚಂಚಲವಾಗಿದ್ದರೆ ಏನನ್ನು ಕಲಿಯಲು ಸಾಧ್ಯವಿಲ್ಲ. ಒಂದು ವೇಳೆ ಕಲಿತರು ಅದು ದೀರ್ಘಕಾಲ ದವರೆಗೆ ಯೋಚನೆಯಲ್ಲಿ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಮನಸ್ಸಿನ ಏಕಾಗ್ರತೆಗೆ ಯೋಗ ಹಾಗೂ ಧ್ಯಾನ ಅತಿ ಮುಖ್ಯ. ಇದರೊಂದಿಗೆ ಭಗವದ್ಗೀತೆ ಉಪನಿಷತ್ತು ಹಾಗೂ ಇನ್ನಿತರ ಶ್ಲೋಕಗಳನ್ನು ಪಠಿಸುವುದರಿಂದ ಮನಸ್ಸು ಹಾಗೂ ದೇಹದ ನಡುವೆ ಏಕಾಗ್ರತೆಯನ್ನು ಸಾಧಿಸುವುದರೊಂದಿಗೆ ಮನಃಶಾಂತಿ ಲಭಿಸುತ್ತದೆ. ಭಗವತ್ ಗೀತೆ ಪಠಣದಿಂದ ಕೃಷ್ಣ ಬೋಧಿಸಿದ ಅಮೂಲ್ಯ ಸಂದೇಶ ದೊಂದಿಗೆ ಜೀವನ ಮೌಲ್ಯವನ್ನು ಅರ್ಥೈಸಿ ಜೀವನದಲ್ಲಿ ರೂಢಿಸಿಕೊಳ್ಳಬೇಕೆಂದರು.
ಮತ್ತೊಬ್ಬ ಅತಿಥಿ ಪ್ರವೀಣ್ ಭಟ್ ಮಾತನಾಡಿ, ಶಿಬಿರದಲ್ಲಿ ಪಾಲ್ಗೊಂಡಂತಹ ಶಿಬಿರಾರ್ಥಿಗಳು ಶಿಬಿರದಲ್ಲಿ ಕಲಿತಂತಹ ವಿಚಾರಗಳನ್ನು ತಮ್ಮ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಹಾಗೂ ಶಿಬಿರದಲ್ಲಿ ಕಲಿತ ವಿಚಾರ ಶಿಬಿರಕ್ಕೆ ಮಾತ್ರ ಸೀಮಿತವಾಗದೆ ಜೀವನದ ಉದ್ದಕ್ಕೂ ಪಾಲಿಸಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಪುದುಪಾಡಿ ಅಯ್ಯಪ್ಪ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ ಶೈಲೇಶ್ ಕಾಮತ್ ಮಾತನಾಡಿ, ಕೊಡಗಿನಲ್ಲಿ ಇದೇ ಮೊದಲ ಬಾರಿ ಕೊಡಗು ಬಾಲವಳಿಕಾರ್ ರಾಜಾಪುರ ಸಾರಸ್ವತ ಬ್ರಾಹ್ಮಣರ ವೈದ್ಧಿಕ ಶಿಬಿರ ನಡೆಸಲಾಗಿದ್ದು ಇದರಲ್ಲಿ ಒಟ್ಟು 15 ವಟುಗಳು ಪಾಲ್ಗೊಂಡಿದ್ದರು. ಮೂರು ದಿನಗಳ ಕಾಲ ನಡೆದ ಈ ಶಿಬಿರದಲ್ಲಿ ರಾಜೇಶ್ ಭಟ್ ಹಾಗೂ ಶ್ರೇಯಸ್ ಭಟ್ ನೇತೃತ್ವದಲ್ಲಿ ಶಿಬಿರಾರ್ಥಿಗಳಿಗೆ ಕುಲದೇವರ ಪೂಜೆ, ಸಂಧ್ಯಾವಂದನೆ, ಯೋಗ , ಭೋಜನ ವಿಧಿ , ಜನಿವಾರ ಧಾರಣೆ ಹಾಗೂ ಭಗವತ್ ಗೀತೆ ಪಠಣ ಕಲಿಸಲಾಗಿದ್ದು ಮುಂದಿನ ವರ್ಷ ಇನ್ನು ಹೆಚ್ಚಿನ ವಟುಗಳೊಂದಿಗೆ 7 ದಿನಗಳ ಶಿಬಿರ ನಡೆಸುವ ಕುರಿತು ಚಿಂತನೆ ನಡೆಸಲಾಗುದು ಎಂದರು.
ವೇದಿಕೆಯಲ್ಲಿ ಶ್ರೇಯಸ್ ಭಟ್ , ವೇಣುಗೋಪಾಲ್ ಭಟ್ ಹಾಜರಿದ್ದರು. ಕಾರ್ಯಮದ ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಗೀತ , ರಾಮಶರ್ಮ, ಜ್ಯೋತಿ , ಸುಮನಾ, ಪಾಲಕರು ಹಾಜರಿದ್ದರು.

blank
Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank