ಯೋಗಾಭ್ಯಾಸದಿಂದ ಲವಲವಿಕೆ ಜೀವನ ಸಾಧ್ಯ : ಯೋಗ ಗುರು ಜಯ ಮುದ್ದು ಶೆಟ್ಟಿ ಅಭಿಪ್ರಾಯ

blank

ಮೂಲ್ಕಿ: ನಿಯಮಿತ ಯೋಗಾಭ್ಯಾಸ ನಮ್ಮ ಆರೋಗ್ಯವನ್ನು ಸುಸ್ಥಿತಿಯಲ್ಲಿರಿಸುವ ಜೊತೆಗೆ ಲವಲವಿಕೆಯಿಂದ ಜೀವಿಸಲು ಸಾಧ್ಯವಾಗುತ್ತದೆ ಎಂದು ಯೋಗ ಗುರು ಜಯ ಮುದ್ದು ಶೆಟ್ಟಿ ಹೇಳಿದರು.

blank

ಮೂಲ್ಕಿ ಗಾಂಧಿ ಮೈದಾನದಲ್ಲಿ ಮೂಲ್ಕಿ ನಗರ ಪಂಚಾಯಿತಿ ಮತ್ತು ಅಖಿಲ ಭಾರತ ಸಾಹಿತ್ಯ ಪರಿಷತ್ ಮೂಲ್ಕಿ ತಾಲೂಕು ಘಟಕ ಹಾಗೂ ಮೂಲ್ಕಿ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಏಳು ದಿನಗಳ ಕಾಲ ನಡೆಯುವ ಪ್ರಾಣಾಯಾಮ ಯೋಗ ತರಬೇತಿ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಕಾರ್ಯಕ್ರಮ ಉದ್ಘಾಟಿಸಿದರು. ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಲಕ್ಷ್ಮೀ, ಮೂಲ್ಕಿ ಉಪ ನಿರೀಕ್ಷಕಿ ಅನಿತಾ, ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ.ಎಚ್. ಅರವಿಂದ ಪೂಂಜ, ಉದ್ಯಮಿ ರೋನಾಲ್ಡ್ ಸಿಲ್ವನ್ ಡಿಸೋಜ, ಅಖಿಲ ಭಾರತ ಸಾಹಿತ್ಯ ಪರಿಷತ್‌ನ ಜಿಲ್ಲಾ ಅಧ್ಯಕ್ಷ ಪಿ.ಬಿ. ಹರೀಶ್ ರೈ ಹಾಗೂ ಗೌರವ ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ್ ರಾವ್, ಮೂಲ್ಕಿ ತಾಲೂಕು ಘಟಕ ಆಧ್ಯಕ್ಷ ಎಂ.ಸರ್ವೋತ್ತಮ ಅಂಚನ್, ಕಾರ್ಯದರ್ಶಿ ಅಕ್ಷತಾ ಎನ್. ಶೆಟ್ಟಿ, ಪುನರೂರು ಪ್ರತಿಷ್ಠಾನ ಅಧ್ಯಕ್ಷ ದೇವಪ್ರಸಾದ್ ಪುನರೂರು, ಮೂಲ್ಕಿ ಬಂಟರ ಸಂಘ ಅಧ್ಯಕ್ಷ ಎಂ. ಅಶೋಕ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ಮುರಳೀಧರ ಭಂಡಾರಿ, ಯೋಗ ಕೇಂದ್ರದ ಡಾ.ಗಣೇಶ್ ಅಮೀನ್ ಸಂಕಮಾರ್, ಯಾದವ ದೇವಾಡಿಗ, ಪೃಥ್ವಿರಾಜ್ ಆಚಾರ್ಯ, ದಿನೇಶ್ ಆಚಾರ್ಯ, ಜಯಕುಮಾರ್ ಕುಬೆವೂರು, ಮಧು ಆಚಾರ್ಯ, ನಾರಾಯಣ, ಸಂಪತ್ ಕಾರ್ನಾಡ್ ಮೊದಲಾದವರಿದ್ದರು. ನಗರ ಪಂಚಾಯಿತಿ ಮಾಜಿ ಅಧ್ಯಕ್ಷ ಸುನೀಲ್ ಆಳ್ವ ಕಾರ್ಯಕ್ರಮ ನಿರೂಪಿಸಿದರು.

ವೇಯ್ಟ ಲಿಫ್ಟಿಂಗ್‌ನಲ್ಲಿ ಆಳ್ವಾಸ್ ಚಾಂಪಿಯನ್

ಸೇವಾ ಮನೋಭಾವದ ಕಾರ್ಯ ಅಮೂಲ್ಯ –  ಕೃಷ್ಣ ಎನ್. ಉಚ್ಚಿಲ್ ಅಭಿಮತ – ಬೊಳ್ನಾಡು ಭಗವತೀ ಕ್ಷೇತ್ರ ಧಾರ್ಮಿಕ ಸಭೆ

Share This Article

ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water

Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…