ನವದೆಹಲಿ: ಹಾಥರಸ್ ಗ್ಯಾಂಗ್ರೇಪ್ ಪ್ರಕರಣವನ್ನು ನಿರ್ವಹಿಸುವಲ್ಲಿ ಉತ್ತರ ಪ್ರದೇಶ ಪೊಲೀಸರು ವಿಫಲವಾಗಿದ್ದಾರೆಂದು ರಾಜ್ಯದ ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ. ನಾಲ್ವರು ಆರೋಪಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದ ಬೆನ್ನಲ್ಲೇ ಬಿಜೆಪಿ ನಾಯಕರು ಹೇಳಿಕೆ ನೀಡಿದ್ದಾರೆ.
ಸಿಬಿಐ ಚಾರ್ಜ್ಶೀಟ್ ಪ್ರಕಾರ, 20 ವರ್ಷದ ದಲಿತ ಯುವತಿಯು ಸೆಪ್ಟೆಂಬರ್ 14 ರಂದು ಹಾಥರಸ್ನಲ್ಲಿ ಮೇಲ್ಜಾತಿ ಸಮುದಾಯದವರು ಎನ್ನಲಾದ ನಾಲ್ವರು ಯುವಕರಿಂದ ಅತ್ಯಾಚಾರಕ್ಕೊಳಗಾಗಿದ್ದು, ಗಂಭೀರವಾಗಿ ಗಾಯಗೊಂಡು ದೆಹಲಿಯ ಆಸ್ಪತ್ರೆಯಲ್ಲಿ ಸಾವಿಗೀಡಾದಳು. ಸೆಪ್ಟೆಂಬರ್ 30ರ ರಾತ್ರಿ ಯುವತಿ ಅಸುನೀಗಿದಾಗ ಮನೆಯ ಬಳಿ ಆತುರದಿಂದ ಅಂತ್ಯಕ್ರಿಯೆ ಮಾಡಲಾಯಿತು. ಈ ಘಟನೆಯು ರಾಷ್ಟ್ರದಾದ್ಯಂತ ಆಕ್ರೋಶವನ್ನು ಉಂಟುಮಾಡಿತು ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: 2ನೇ ಪತ್ನಿ ಜತೆ ಪ್ರಸ್ತಕ್ಕೆ ಮುಂದಾಗಿದ್ದವನಿಗೆ ಮೊದಲನೇ ಹೆಂಡತಿ ಕೊಟ್ಟಳು ಬಿಗ್ ಶಾಕ್..!
ಈ ಬಗ್ಗೆ ಮಾತನಾಡಿರುವ ಉತ್ತರ ಪ್ರದೇಶ ಕಾರ್ಮಿಕ ಸಚಿವ ಸುನೀಲ್ ಭರಾಳ, ಯುಪಿ ಸರ್ಕಾರ ಯಾವಾಗಲೂ ಸಂತ್ರಸ್ತೆಯ ಕುಟುಂಬದ ಪರವಾಗಿ ನಿಲ್ಲುತ್ತದೆ. ಸಿಎಂ ಯೋಗಿ ಆದಿತ್ಯನಾಥ್ ಅವರೇ ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆ. ಅಲ್ಲದೆ, ಯುಪಿ ಪೊಲೀಸರು ಚೆನ್ನಾಗಿ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಯೋಗಿ ಅವರಿಗೆ ಇಲ್ಲ. ಎಲ್ಲ ಪೊಲೀಸ್ ಅಧಿಕಾರಿಗಳು ಒಳ್ಳೆಯವರಲ್ಲ. ಆರಂಭದ ದಿನದಿಂದ ಯೋಗಿ ಅವರು ಸಂತ್ರಸ್ತೆಯ ಕುಟುಂಬದೊಂದಿಗೆ ಇದ್ದಾರೆಂದು ಹೇಳಿದರು.
ನಾಲ್ವರು ಆರೋಪಿಗಳ ವಿರುದ್ಧ ಕಳೆದ ವಾರ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ದಾಖಲಿಸಿದೆ. ಅಲ್ಲದೆ, ಎಸ್ಸಿ/ಎಸ್ಟಿ ದೌರ್ಜನ್ಯ ತಡೆಗಟ್ಟುವಿಕೆ ಕಾಯ್ದೆ ಅಡಿಯು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದೆ. ದೆಹಲಿಯಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಹಾಥರಸ್ನ ಕೋರ್ಟ್ ಮುಂದೆ ಚಾರ್ಜ್ಶೀಟ್ ಅನ್ನು ತನಿಖಾ ಸಂಸ್ಥೆ ಸಲ್ಲಿಸಿದೆ.
ಸಾವಿಗೀಡಾದ ಬೆನ್ನಲ್ಲೇ ಕುಟುಂಬದ ಒಪ್ಪಿಗೆಯನ್ನು ಪಡೆಯದೇ ಸಂತ್ರಸ್ತೆಯ ಅಂತ್ಯಸಂಸ್ಕಾರವನ್ನು ರಾತ್ರೋರಾತ್ರಿ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಮಾಡಿ ಮುಗಿಸಿದ್ದು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದಲ್ಲದೆ ಭಾರಿ ಆಕ್ರೋಶಕ್ಕೂ ಕಾರಣವಾಗಿದೆ. ಪ್ರಕರಣ ಕುರಿತು ಸಾಕಷ್ಟು ದೂರುಗಳನ್ನು ಸಹ ಸಲ್ಲಿಸಲಾಗಿದೆ. (ಏಜೆನ್ಸೀಸ್)
ವಾಟ್ಸ್ಆ್ಯಪ್ ಸ್ಟೇಟಸ್ನಿಂದ ಬಯಲಾಯ್ತು ಮುಚ್ಚಿಟ್ಟಿದ್ದ ರಹಸ್ಯ: ಮರುಗಳಿಗೆಯಲ್ಲೇ ಮಹಿಳೆ ನೇಣಿಗೆ ಶರಣು!
ಐದೇ ದಿನದಲ್ಲಿ ಎರಡು ಮದುವೆಯಾಗಿ ಟೆಕ್ಕಿ ಪರಾರಿ: ರಹಸ್ಯ ಮದ್ವೆ ಬಯಲಾದ ಕತೆಯೇ ರೋಚಕ!
ಚಿನ್ನಾಭರಣ ಪ್ರಿಯರಿಗೆ ಬಿಗ್ ಶಾಕ್! ಒಂದೇ ವಾರದಲ್ಲಿ ಶೇ. 2 ಏರಿದ ಗೋಲ್ಡ್ ರೇಟ್!