ಇದು ಚಿಂತಿಸುವ ಸಂಗತಿಯಲ್ಲವೇ? ನಿಮ್ಮ ಅಹಂಕಾರದಿಂದಲೇ ಸಂಜು ಸ್ಯಾಮ್ಸನ್ ಭವಿಷ್ಯ ಹಾಳಾಗುತ್ತಿದೆ! Sanju Samson

Sanju Samson

Sanju Samson : ಫೆಬ್ರವರಿ 19ರಿಂದ ಪಾಕಿಸ್ತಾನದಲ್ಲಿ ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್​ ಟ್ರೋಫಿಗೆ ಭಾರತ ತಂಡ ಪ್ರಕಟವಾಗಿರುವುದು ನಿಮಗೆಲ್ಲರಿಗೂ ಗೊತ್ತೇ ಇದೆ. ಟೀಮ್​ ಇಂಡಿಯಾದ ಸ್ಟಾರ್​ ಕ್ರಿಕೆಟಿಗ ಸಂಜು ಸ್ಯಾಮ್ಸನ್​ಗೆ ಸ್ಥಾನ ಸಿಗಲಿದೆ ಎಂಬ ಭರವಸೆ ಇತ್ತು. ಆದರೆ, ಅದು ಹುಸಿಯಾಗಿದೆ. ಉತ್ತಮ ಪ್ರದರ್ಶನ ನೀಡಿದರೂ ಆಯ್ಕೆ ಮಾಡದಿದ್ದಕ್ಕೆ ಸಂಜು ಭಾರಿ ನಿರಾಶೆ ಅನುಭವಿಸಿದ್ದಾರೆ. ಇದರ ನಡುವೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಸಂಜುಗೆ ಸ್ಥಾನ ಸಿಗದಿದ್ದನ್ನು ಖಂಡಿಸಿದ್ದಾರೆ.

ಪ್ರತಿ 4 ವರ್ಷಗಳಿಗೊಮ್ಮೆ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಈ ವರ್ಷ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದ್ದು, ರೋಹಿತ್ ಶರ್ಮ ನಾಯಕನಾಗಿದ್ದು, ಶುಭಮಾನ್​ ಗಿಲ್ ಉಪನಾಯಕನಾಗಿದ್ದಾರೆ.

ತಂಡದಲ್ಲಿ ಸಂಜು ಸ್ಯಾಮ್ಸನ್ ಸ್ಥಾನ ಪಡೆಯುತ್ತಾರೆ ಎಂದು ಅಭಿಮಾನಿಗಳು ನಿರೀಕ್ಷಿಸುತ್ತಿದ್ದರು. ಆದರೆ, ಸಂಜುಗೆ ಸ್ಥಾನ ನೀಡದಿರುವುದು ಅಭಿಮಾನಿಗಳನ್ನು ನಿರಾಶೆಗೊಳಿಸಿದೆ. ಸಂಜು ಸ್ಯಾಮ್ಸನ್ ಅವರು ಕಳೆದ 5 ಟಿ20 ಪಂದ್ಯಗಳಲ್ಲಿ 3 ಶತಕಗಳನ್ನು ಗಳಿಸಿದ್ದಾರೆ. ಹೀಗಿರುವಾಗ ಸ್ಥಾನ ನೀಡದಿರುವುದು ಭಾರಿ ಟೀಕೆಗೆ ಗುರಿಯಾಗಿದೆ. ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್ ಸಹ ಟೀಕೆ ಮಾಡಿದ್ದಾರೆ.

ಇದು ಸಂಜು ಸ್ಯಾಮ್ಸನ್ ಮತ್ತು ಕೇರಳ ಕ್ರಿಕೆಟ್ ಅಸೋಸಿಯೇಷನ್ ​​ನಡುವಿನ ದುಃಖದ ಕತೆ. ಇದಕ್ಕೂ ಮೊದಲು, ಕಾರಣಾಂತರಗಳಿಂದ ಸೈಯದ್ ಮುಷ್ತಾಕ್ ಅಲಿ ಮತ್ತು ವಿಜಯ್ ಹಜಾರೆ ಸರಣಿಯ ತರಬೇತಿ ಶಿಬಿರದಲ್ಲಿ ಭಾಗವಹಿಸುವುದಿಲ್ಲ ಎಂದು ಸಂಜು ಸ್ಯಾಮ್ಸನ್, ಕೇರಳ ಕ್ರಿಕೆಟ್ ಅಸೋಸಿಯೇಷನ್‌ಗೆ ಪತ್ರ ಬರೆದಿದ್ದರು. ಭಾಗವಹಿಸಲು ಸಾಧ್ಯವಾಗದಿದ್ದಕ್ಕೆ ಬೇಸರ ಹೊರಹಾಕಿದರು. ಆದರೆ, ವಿಜಯ್ ಹಜಾರೆ ಸರಣಿಗಾಗಿ ಸಂಜು ಅವರನ್ನು ಕೇರಳ ತಂಡದಿಂದ ಕೈಬಿಡಲಾಯಿತು. ಇದೀಗ ಭಾರತೀಯ ಕ್ರಿಕೆಟ್ ತಂಡದಿಂದಲೂ ಕೈಬಿಡಲಾಗಿದೆ.

ವಿಜಯ್ ಹಜಾರೆ ಟ್ರೋಫಿಯಲ್ಲಿ ಸಂಜು ಸ್ಯಾಮ್ಸನ್​ ಔಟಾಗದೆ 212 ರನ್ ಗಳಿಸಿರುವ ದಾಖಲೆ ಇದೆ. ಭಾರತೀಯ ಕ್ರಿಕೆಟ್ ತಂಡಕ್ಕಾಗಿ ಆಡುವಾಗ 56.66 (ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಪಂದ್ಯದಲ್ಲಿ ಅವರ ಶತಕ ಸೇರಿದಂತೆ) ರನ್ ರೇಟ್​ ಹೊಂದಿದ್ದಾರೆ. ಇಂತಹ ಉತ್ತಮ ಪ್ರದರ್ಶನದ ಹೊರತಾಗಿಯೂ ಬಿಸಿಸಿಐ ಆಡಳಿತಗಾರರ ಅಹಂಕಾರದಿಂದ ಸಂಜು ಸ್ಯಾಮ್ಸನ್​ ಭವಿಷ್ಯ ಹಾಳಾಗುತ್ತಿದೆ. ಇದೇ ಅಹಂಕಾರವು ಕೇರಳ ತಂಡವನ್ನು ವಿಜಯ್ ಹಜಾರೆಯಲ್ಲಿ ಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆಯಲು ಸಹ ಅನುಮತಿಸಲಿಲ್ಲ. ಇದು ಚಿಂತಿಸುವ ಸಂಗತಿಯಲ್ಲವೇ? ಎಂದು ತರೂರ್​ ಹೇಳಿದ್ದಾರೆ.

ಭಾರತ ತಂಡ ಹೀಗಿದೆ…

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ.

ಅಂದಹಾಗೆ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ ಆತಿಥ್ಯ ವಹಿಸಲಿದೆ. ರಾಜಕೀಯ ಸಮಸ್ಯೆಗಳಿಂದಾಗಿ, ಟೀಮ್ ಇಂಡಿಯಾ ತನ್ನ ಎಲ್ಲ ಪಂದ್ಯಗಳನ್ನು ಯುಎಇಯಲ್ಲಿ ಆಡಲಿದೆ. ಇದರೊಂದಿಗೆ ಒಂದು ಸೆಮಿಫೈನಲ್ ಪಂದ್ಯವನ್ನು ಕೂಡ ಯುಎಇಯಲ್ಲಿಯೇ ನಡೆಸಲಾಗುತ್ತದೆ. ಆದರೆ, ಫೈನಲ್​ ಪಂದ್ಯಕ್ಕೆ ಇನ್ನೂ ಸ್ಥಳ ಅಂತಿಮಗೊಂಡಿಲ್ಲ. ಭಾರತ ಫೈನಲ್​ಗೆ ಪ್ರವೇಶಿಸಿದರೆ, ಆ ಪಂದ್ಯವನ್ನು ಯುಎಇಯಲ್ಲಿ ನಡೆಸಲಾಗುತ್ತದೆ. ಭಾರತ ಬಿಟ್ಟು ಬೇರೆ ಯಾವುದೇ ತಂಡಗಳು ಫೈನಲ್ ತಲುಪಿದರೆ, ಪಾಕಿಸ್ತಾನದಲ್ಲೇ ಆ ಪಂದ್ಯ ನಡೆಯಲಿದೆ. (ಏಜೆನ್ಸೀಸ್​)

ನಿಮಗೂ ಆಗಾಗ ಕೆಟ್ಟ ಕನಸುಗಳು ಬರುತ್ತವೆಯೇ? ತಪ್ಪಿಸುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… Nightmares

3ನೇ ಮಹಾಯುದ್ಧ ತಡೆಯುತ್ತೇನೆ! ಪ್ರಮಾಣ ವಚನಕ್ಕೂ ಮುನ್ನ ಅಮೆರಿಕ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ | Donald Trump

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…