ಹಾವೇರಿ: ಹೆಣ್ಣು ಕೊಡಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸತ್ತ ಯುವ ರೈತರು, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ಐಟಿ ಉದ್ಯೋಗಿಗಳನ್ನು ವಜಾಗೊಳಿಸಿದ ನಂತರ ಎದುರಾಗುತ್ತಿದೆ ಮತ್ತೊಂದು ದೊಡ್ಡ ಹೊಡೆತ!
ಬ್ಯಾಡಗಿ ತಾಲೂಕಿನ ಯುವ ರೈತರು ಕನ್ಯಾಭಾಗ್ಯ ಆರಂಭಿಸುವಂತೆ ಪತ್ರದ ಮೂಲಕ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. 5 ರಿಂದ 6 ಎಕರೆ ಜಮೀನು ಇದೆ. ಆದರೂ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ರೈತರು ಎಂದು ಎಷ್ಟೋ ಜನ ಕನ್ಯೆಯನ್ನು ತೋರಿಸುತ್ತಿಲ್ಲ. ಅದೇ 5 ಸಾವಿರ ಸಂಬಳ ದುಡಿಯುವ ವ್ಯಕ್ತಿಗೆ ಹೆಣ್ಣು ಕೊಡಲು ಮುಂದಾಗುತ್ತಾರೆ.
ಇದನ್ನೂ ಓದಿ: ಬೇಬಿ ಪೌಡರ್ನಿಂದ ಕ್ಯಾನ್ಸರ್: ಕಂಪನಿಗೆ ಬರೋಬ್ಬರಿ $18.8 ಮಿಲಿಯನ್ ದಂಡ ವಿಧಿಸಿದ ನ್ಯಾಯಾಧೀಶರು!
ನಾವು ಉತ್ತಮ ಮಳೆ ಬಂದರೆ ಲಕ್ಷಾಂತರ ರೂಪಾಯಿ ಗಳಿಸುತ್ತೇವೆ. ಆದರೆ ಹವಾಮಾನ ವೈಪರೀತ್ಯದಿಂದ ನಷ್ಟ ಅನುಭವಿಸುತ್ತಿದ್ದೇವೆ. ಕೃಷಿ ಮಾಡುತ್ತಿರುವವರೇ ತಮ್ಮ ಮಗಳನ್ನು ಕೃಷಿಕನಿಗೆ ಕೊಡಲು ಹಿಂದೇಟು ಹಾಕುವ ಪರಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಯುವ ರೈತರನ್ನು ಮದುವೆಯಾದ ಯುವತಿಯರಿಗೆ ಕನಿಷ್ಠ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು. ರೈತರನ್ನು ಮದುವೆಯಾದ ವಿದ್ಯಾವಂತ ಯುವತಿಯರಿಗೆ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ನೀಡಬೇಕು. ಮನೆಯೊಡತಿಗೆ 2 ಸಾವಿರ ಕೊಡುವ ರೀತಿ ರೈತರನ್ನು ಮದುವೆಯಾದವರಿಗೂ ಹಣ ಕೊಡಬೇಕು. ಇಂತಹ ಕಾರ್ಯಕ್ರಮಗಳನ್ನೊಳಗೊಂಡ ಕನ್ಯಾಭಾಗ್ಯ ಯೋಜನೆ ಜಾರಿಗೆ ತರಬೇಕೆಂದು ಸಿದ್ದರಾಮಯ್ಯ ಅವರಿಗೆ ಯುವರೈತರು ಮನವಿ ಮಾಡಿದ್ದಾರೆ.
ಸೀಮಾ ಹೈದರ್ ಆಯ್ತು, ಪ್ರಿಯಕರನನ್ನು ಹುಡುಕಿಕೊಂಡು ಏಳು ಸಮುದ್ರ ದಾಟಿ ಬಂದ ಮತ್ತೋರ್ವ ಮಹಿಳೆ!