ಬೆಂಗಳೂರು: ಕ್ಯಾಂಟರ್ವೊಂದರ ಚಾಲಕನೇ ಇಲ್ಲೊಬ್ಬ ಯುವಕನ ಪಾಲಿಗೆ ಯಮನಾಗಿ ಪರಿಣಮಿಸಿದ್ದಾನೆ. ಪರಿಣಾಮವಾಗಿ, ಗೆಳೆಯನೊಂದಿಗೆ ತೆರಳುತ್ತಿದ್ದ ಯುವಕ, ಅತಿವೇಗದ ಅಜಾಗರೂಕತೆಯ ಚಾಲನೆಗೆ ಬಲಿಯಾಗಿದ್ದಾನೆ. ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಸೊಹಿಲ್ ಬಿಸ್ವಾಸ್ (19) ಸಾವಿಗೀಡಾದ ಯುವಕ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಕನಕಪುರ ರಸ್ತೆಯ ಯುನಿಟೆಕ್ ಗೇಟ್ ಬಳಿ ಈ ಅಪಘಾತ ಸಂಭವಿಸಿತ್ತು. ಮೂಲತಃ ಪಶ್ಚಿಮಬಂಗಾಳದ ಈತ ಬೆಂಗಳೂರಿನಲ್ಲಿ ಕಾಂಕ್ರೀಟ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ.
ಇಂದು ಬೆಳಗ್ಗೆ ಕೆಲಸಕ್ಕೆಂದು ಗೆಳೆಯನ ಜತೆ ಬೈಕ್ನಲ್ಲಿ ಹೊರಟಿದ್ದ ಈತ, ಎಲೆಕ್ಟ್ರಾನಿಕ್ ಸಿಟಿಯಿಂದ ಕನಕಪುರರಸ್ತೆ ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಕ್ಯಾಂಟರ್ ಬೈಕ್ಗೆ ಡಿಕ್ಕಿಯಾಗಿದ್ದು, ಸೊಹಿಲ್ ಮೇಲೆಯೇ ಹರಿದುಹೋಗಿದೆ.
ತೊಡೆಗೆ ಗಂಭೀರ ಗಾಯವಾದ ಸೊಹಿಲ್ನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ. ಹರಿಯಾಣ ಮೂಲದ ಕ್ಯಾಂಟರ್ ಚಾಲಕನನ್ನು ಬಂಧಿಸಿರುವ ಕುಮಾರಸ್ವಾಮಿ ಬಡಾವಣೆ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡಾ.ಬ್ರೋ ಯಾವಾಗ ವಿದೇಶಕ್ಕೆ ಹೋಗಲ್ಲ?; ಒಂದು ದೇಶಕ್ಕೆ ಹೊರಟಾಗ ಅವರ ಅಧ್ಯಯನ ಹೇಗಿರುತ್ತೆ?; ಇಲ್ಲಿದೆ ಮಾಹಿತಿ..
6 ತಿಂಗಳ ಕಾಲ ಒಂದೊಂದಾಗಿ ಕಾಣೆಯಾಗಿದ್ದವು ಮನೆಯೊಳಗಿದ್ದ ಆಭರಣಗಳು!; ಕೊನೆಗೂ ಬಯಲಾಯ್ತು ಅಸಲಿಯತ್ತು