ಹೈದರಾಬಾದ್: ಪತ್ನಿಯೊಂದಿಗೆ ಜಗಳವಾಡಿ ಕುಡಿದ ಮತ್ತಿನಲ್ಲಿ ವಿದ್ಯುತ್ ಕಂಬವೇರಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ತೆಲಂಗಾಣದ ಹೈದರಾಬಾದ್ ಬಳಿಯ ಆದಿಲಾಬಾದ್ನಲ್ಲಿ ನಡೆದಿದೆ.
ಇದನ್ನೂ ಓದಿ: 25 ವರ್ಷ, 12ಕ್ಕೂ ಹೆಚ್ಚು ರಾಜ್ಯಗಳಲ್ಲಿ 1200 ಕಳ್ಳತನ ಮಾಡಿದ್ದ ಖತರ್ನಾಕ್ ಕಳ್ಳ..!
ಸ್ಥಳೀಯ ಕೆಆರ್ಕೆ ಕಾಲೋನಿಯ ಟ್ರ್ಯಾಕ್ಟರ್ ಚಾಲಕ ಬಾಲು ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿರುವ ಯುವಕನಾಗಿದ್ದು, ಈ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವಕನು ತನ್ನ ಪತ್ನಿಯೊಂದಿಗೆ ಜಗಳವಾಡಿದ್ದು, ಕುಡಿದ ಮತ್ತಿನಲ್ಲಿ ವಿದ್ಯುತ್ ಕಂಬ ಹತ್ತಿದ್ದಾನೆ. ಈ ವೇಳೆ ಎಚ್ಚೆತ್ತ ಸ್ಥಳೀಯರು ವಿದ್ಯುತ್ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಕೂಡಲೇ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಈ ವೇಳೆ ಆತ ವಿದ್ಯುತ್ ತಂತಿಯ ಹಿಡಿದಿದ್ದು, ಆಯತಪ್ಪಿ ನೆಲಕ್ಕೆ ಬಿದ್ದಿದ್ದಾನೆ.
అదిలాబాద్ – భార్యతో గొడవపడి కరెంట్ స్తంభం ఎక్కి దూకిన భర్త pic.twitter.com/jXom4VO50H
— Telugu Scribe (@TeluguScribe) July 25, 2023
ಕೂಡಲೇ ಸ್ಥಳೀಯರು ಆತನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದು, ಐಸಿಯುನಲ್ಲಿ ಆತನನ್ನು ಇರಿಸಲಾಗಿದೆ.(ಏಜೆನ್ಸೀಸ್)