More

    ವಿಷ ಕುಡಿದು ಯುವತಿ ಆತ್ಮಹತ್ಯೆ

    ಬೇಲೂರು: ಪ್ರೀತಿಸಿದವನು ಮೋಸ ಮಾಡಿದನೆಂದು ಮನನೊಂದು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಮೃತಪಟ್ಟಿದ್ದಾಳೆ.

    ತಾಲೂಕಿನ ಬೆಳ್ಳೊಟ್ಟೆ ಗ್ರಾಮದ ಆಶಾ (20) ಮೃತಳು. ಬೇಲೂರು ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ಓದುತ್ತಿದ್ದ ಆಶಾ ಅದೇ ಕಾಲೇಜಿನಲ್ಲಿ ದ್ವಿತೀಯ ಬಿಎ ಓದುತ್ತಿದ್ದ ಮಂಜುನಾಥ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆಶಾಳ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಆಕೆಯನ್ನು ಪ್ರೀತಿ ಮಾಡುತ್ತಿರುವುದಾಗಿ ನಂಬಿಸಿ, ಪ್ರತಿದಿನ ಆಶಾಳೊಂದಿಗೆ ಸುತ್ತಾಡುತ್ತಿದ್ದ ಎಂದು ತಿಳಿದುಬಂದಿದೆ.

    ಅ.6ರಂದು ಮಂಜುನಾಥ ಬೇರೆ ಹುಡುಗಿಯೊಂದಿಗೆ ಸುತ್ತಾಡುವುದನ್ನು ಆಶಾ ನೋಡಿ ಪ್ರಶ್ನಿಸಿದ್ದಾಳೆ. ಇದಕ್ಕೆ ಪ್ರತಿಕ್ರಿಯಿಸಿದ ಆತ ಹೀಗೆಲ್ಲಾ ಪ್ರಶ್ನೆ ಮಾಡಬೇಡ, ಪ್ರಶ್ನಿಸಿದರೆ ಕೊಲೆ ಮಾಡುತ್ತೇನೆ. ನೀನು ನನ್ನೊಂದಿಗೆ ಸುತ್ತಾಡಿರುವ ಫೋಟೋ, ಮೆಸೇಜ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಸಿದ್ದಾನೆ. ಇದರಿಂದ ಮನನೊಂದ ಆಶಾ ಕಾಲೇಜಿನ ಸಮೀಪ ವಿಷ ಸೇವಿಸಿದ್ದಳು.

    ಮಂಜುನಾಥ ಆಕೆಯನ್ನು ಬೇಲೂರಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದ. ವೈದ್ಯರ ಸಲಹೆ ಮೇರೆಗೆ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಚಿಕಿತ್ಸೆಗೆ ಸ್ಪಂದಿಸದ ಆಶಾ ಶುಕ್ರವಾರ ಮೃತಪಟ್ಟಿದ್ದಾಳೆ. ಮಂಜುನಾಥನ ವಿರುದ್ಧ ಮೃತಳ ತಂದೆ ರಾಮಯ್ಯ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts